<p><strong>ಮುಂಬೈ: </strong>ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಗೃಹ ಸಚಿವ ಅನಿಲ್ ದೇಶಮುಖ್ ಹಾಗೂ ಈ ಆರೋಪ ಮಾಡಿರುವ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ವಿರುದ್ಧ ಸ್ವತಂತ್ರ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಶಿಕ್ಷಕರೊಬ್ಬರು ಬಾಂಬೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮಂಗಳವಾರ ಸಲ್ಲಿಸಿದ್ದಾರೆ.</p>.<p>ಮುಂಬೈನ ಮೋಹನ್ ಪ್ರಭಾಕರ್ ಭಿಡೆ ಪಿಐಎಲ್ ಸಲ್ಲಿಸಿರುವ ಶಿಕ್ಷಕ.</p>.<p>‘ದೇಶಮುಖ್ ಹಾಗೂ ಸಿಂಗ್ ನಡುವಿನ ಸಂಭಾಷಣೆಯನ್ನು ನಾನು ಆಲಿಸಿದ್ದೇನೆ. ಇಬ್ಬರ ಪೈಕಿ ಒಬ್ಬರು ತಪ್ಪಿತಸ್ಥರಾಗಿರುವುದು ನಿಶ್ಚಿತ. ಇಲ್ಲವೇ, ಸತ್ಯವನ್ನು ಹೇಳುತ್ತಿಲ್ಲ’ ಎಂದು ಭಿಡೆ ಅವರು ಅರ್ಜಿಯಲ್ಲಿ ಹೇಳಿದ್ದಾರೆ.</p>.<p>‘ದೇಶಮುಖ್ ಹಾಗೂ ಸಿಂಗ್ ವಿರುದ್ಧ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಲು ಆದೇಶಿಸಬೇಕು. ಇಲ್ಲವೇ, ಸುಪ್ರೀಂಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಯಬೇಕು’ ಎಂದು ಕೋರಿದ್ದಾರೆ.</p>.<p>ಈ ಅರ್ಜಿಯ ತುರ್ತು ವಿಚಾರಣೆಯನ್ನು ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ದೀಪಂಕರ್ ದತ್ತಾ ಅವರು ಬುಧವಾರ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.</p>.<p>ಇನ್ನೊಂದೆಡೆ, ಸಚಿವ ದೇಶಮುಖ್ ವಿರುದ್ಧ ತಾನು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಸಿಂಗ್ ಅವರು ಸಲ್ಲಿಸಿರುವ ಪಿಐಎಲ್ನ ವಿಚಾರಣೆ ಸಹ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ನೇತೃತ್ವದ ಪೀಠದಲ್ಲಿ ಬುಧವಾರ (ಮಾ.31) ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಗೃಹ ಸಚಿವ ಅನಿಲ್ ದೇಶಮುಖ್ ಹಾಗೂ ಈ ಆರೋಪ ಮಾಡಿರುವ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ವಿರುದ್ಧ ಸ್ವತಂತ್ರ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಶಿಕ್ಷಕರೊಬ್ಬರು ಬಾಂಬೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮಂಗಳವಾರ ಸಲ್ಲಿಸಿದ್ದಾರೆ.</p>.<p>ಮುಂಬೈನ ಮೋಹನ್ ಪ್ರಭಾಕರ್ ಭಿಡೆ ಪಿಐಎಲ್ ಸಲ್ಲಿಸಿರುವ ಶಿಕ್ಷಕ.</p>.<p>‘ದೇಶಮುಖ್ ಹಾಗೂ ಸಿಂಗ್ ನಡುವಿನ ಸಂಭಾಷಣೆಯನ್ನು ನಾನು ಆಲಿಸಿದ್ದೇನೆ. ಇಬ್ಬರ ಪೈಕಿ ಒಬ್ಬರು ತಪ್ಪಿತಸ್ಥರಾಗಿರುವುದು ನಿಶ್ಚಿತ. ಇಲ್ಲವೇ, ಸತ್ಯವನ್ನು ಹೇಳುತ್ತಿಲ್ಲ’ ಎಂದು ಭಿಡೆ ಅವರು ಅರ್ಜಿಯಲ್ಲಿ ಹೇಳಿದ್ದಾರೆ.</p>.<p>‘ದೇಶಮುಖ್ ಹಾಗೂ ಸಿಂಗ್ ವಿರುದ್ಧ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಲು ಆದೇಶಿಸಬೇಕು. ಇಲ್ಲವೇ, ಸುಪ್ರೀಂಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಯಬೇಕು’ ಎಂದು ಕೋರಿದ್ದಾರೆ.</p>.<p>ಈ ಅರ್ಜಿಯ ತುರ್ತು ವಿಚಾರಣೆಯನ್ನು ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ದೀಪಂಕರ್ ದತ್ತಾ ಅವರು ಬುಧವಾರ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.</p>.<p>ಇನ್ನೊಂದೆಡೆ, ಸಚಿವ ದೇಶಮುಖ್ ವಿರುದ್ಧ ತಾನು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಸಿಂಗ್ ಅವರು ಸಲ್ಲಿಸಿರುವ ಪಿಐಎಲ್ನ ವಿಚಾರಣೆ ಸಹ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ನೇತೃತ್ವದ ಪೀಠದಲ್ಲಿ ಬುಧವಾರ (ಮಾ.31) ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>