‘ನಾನು ಎಂಜಿನಿಯರಿಂಗ್ ಕಲಿಕೆಯನ್ನು ಮಧ್ಯದಲ್ಲಿಯೇ ಕೈಬಿಟ್ಟೆ. ಅದಕ್ಕಾಗಿ ನನಗೆ ವಿಷಾದವಿಲ್ಲ. ಶಿಕ್ಷಕ ವೃತ್ತಿ ಆಯ್ದುಕೊಂಡಿದ್ದು ನನ್ನ ಅದೃಷ್ಟ’ ಎಂದು ಅವರು ಹೇಳಿದರು. ಪರಿತ್ವಾಡಿಯಲ್ಲಿ ಇರುವ ಜಿಲ್ಲಾ ಪರಿಷತ್ತಿನ ಪ್ರಾಥಮಿಕ ಶಾಲೆ ಶಿಕ್ಷಕರಾದ ಅವರನ್ನು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೀಡಿದ ಆದ್ಯತೆ, ಪಠ್ಯಪುಸ್ತಕದಲ್ಲಿ ಕ್ಯೂಆರ್ ಕೋಡ್ ಅಳವಡಿಕೆಗಾಗಿ ಪ್ರಶಸ್ತಿಗೆ ಪರಿಗಣಿಸಲಾಗಿದೆ.