ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋದರಿಯ ಒಡವೆಗಳನ್ನು ಬಿಚ್ಚಿಸಿ, ವಶಕ್ಕೆ ಪಡೆದದ್ದೆಂದು ಹೇಳಿಕೊಂಡ ಇ.ಡಿ: ತೇಜಸ್ವಿ

Last Updated 14 ಮಾರ್ಚ್ 2023, 5:47 IST
ಅಕ್ಷರ ಗಾತ್ರ

ಪಟ್ನಾ: ಕಳೆದ ವಾರ ದೆಹಲಿಯ ನಮ್ಮ ನಿವಾಸದ ಮೇಲೆ ದಾಳಿ ಮಾಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇವಲ ಅರ್ಧ ಗಂಟೆಯಲ್ಲಿ ಶೋಧನೆ ಪೂರ್ಣಗೊಳಿಸಿದ್ದರು. ಆದರೂ, ಮೇಲಿನಿಂದ ಆದೇಶ ಬರುವುದನ್ನೇ ಕಾಯುತ್ತಿದ್ದ ಅಧಿಕಾರಿಗಳು ಗಂಟೆ ಗಟ್ಟಲೆ ನಿವಾಸದಲ್ಲೇ ಉಳಿದಿದ್ದರು ಎಂದು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸೋಮವಾರ ಆರೋಪಿಸಿದ್ದಾರೆ.

ವಿಧಾನಸಭೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಯಾದವ್, ದಾಳಿ ವೇಳೆ ₹600 ಕೋಟಿ ಪತ್ತೆಯಾಗಿದೆ ಎಂಬ ಇ.ಡಿಯ ಹೇಳಿಕೆಯನ್ನು ಅಲ್ಲಗಳೆದರು.

ನನ್ನ ಸೋದರಿಯರು ಮತ್ತು ಭಾವಂದಿರು ಧರಿಸಿದ್ದ ಆಭರಣಗಳನ್ನು ಬಿಚ್ಚಿಸಿದ ಇ.ಡಿ ಅಧಿಕಾರಿಗಳು, ಅವುಗಳ ಚಿತ್ರ ತೆಗೆದು, ವಶಕ್ಕೆ ಪಡೆದ ಆಭರಣ ಎಂದು ಹೇಳಿಕೊಂಡಿದ್ದಾರೆ ಎಂದು ದೂರಿದರು.

‘ನಾವು ಬಿಜೆಪಿ-ಆರ್‌ಎಸ್‌ಎಸ್‌ನಂತೆ ರಾಜಕೀಯ ವಿಜ್ಞಾನದ ವಿದ್ಯಾರ್ಥಿಗಳಲ್ಲ. ನಾವು ನೈಜ ರಾಜಕೀಯವನ್ನು ಮಾತ್ರ ಮಾಡುತ್ತೇವೆ. ಅವರನ್ನು ಎದುರಿಸಲು ಸಾರ್ವಜನಿಕ ಬೆಂಬಲವನ್ನು ಹೊಂದಿದ್ದೇವೆ. ಆದರೆ ಅವರು ನಿಜವಾದ ರಾಜಕೀಯ ರಣರಂಗದಿಂದ ಹೆದರಿ ಓಡಿ ಹೋಗುತ್ತಿದ್ದಾರೆ’ ಎಂದು ತೇಜಸ್ವಿ ವ್ಯಂಗ್ಯವಾಡಿದ್ದಾರೆ.

ಪಂಚನಾಮೆ ಬಗ್ಗೆ ಇ.ಡಿ ಅಧಿಕಾರಿಗಳು ಮಾಹಿತಿ ಬಹಿರಂಗಪಡಿಸಬೇಕು. ಇಲ್ಲವೇ ನಾನೇ ಅದರ ಮಾಹಿತಿ ಬಿಡುಗಡೆ ಮಾಡುತ್ತೇನೆ ಎಂದು ತೇಜಸ್ವಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ಐಎಎನ್‌ಎಸ್‌ ವರದಿ ಮಾಡಿದೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT