ಪಟ್ನಾ: ಕಳೆದ ವಾರ ದೆಹಲಿಯ ನಮ್ಮ ನಿವಾಸದ ಮೇಲೆ ದಾಳಿ ಮಾಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇವಲ ಅರ್ಧ ಗಂಟೆಯಲ್ಲಿ ಶೋಧನೆ ಪೂರ್ಣಗೊಳಿಸಿದ್ದರು. ಆದರೂ, ಮೇಲಿನಿಂದ ಆದೇಶ ಬರುವುದನ್ನೇ ಕಾಯುತ್ತಿದ್ದ ಅಧಿಕಾರಿಗಳು ಗಂಟೆ ಗಟ್ಟಲೆ ನಿವಾಸದಲ್ಲೇ ಉಳಿದಿದ್ದರು ಎಂದು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸೋಮವಾರ ಆರೋಪಿಸಿದ್ದಾರೆ.