ಪಟ್ನಾ: '10 ಲಕ್ಷ ಉದ್ಯೋಗ ನೀಡುವ ಭರವಸೆಯಿಂದ ತೇಜಸ್ವಿ ಯಾದವ್ ಹಿಂದೆ ಸರಿದಿದ್ದಾರೆ' ಎಂದು ಆರೋಪಿಸಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಇದು ತಿರುಚಿದ ವಿಡಿಯೊ ಎಂದಿರುವ ತೇಜಸ್ವಿ ಯಾದವ್, ತಮ್ಮ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿಎಂ ನಿತೀಶ್ ಕುಮಾರ್ ಅವರ ಜೊತೆ ಗಂಭೀರ ಚಿಂತನೆ ನಡೆಸಿರುವುದಾಗಿ ತಿಳಿಸಿದ್ದಾರೆ.