‘ಅಗತ್ಯ ವಸ್ತುಗಳ ದರ ಏರಿಕೆ ಕುರಿತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹೇಳಿಕೆ ನೀಡಬೇಕು. ಅಲ್ಲದೆ, ಬಿಹಾರದಲ್ಲಿ ಎಪಿಎಂಸಿಗಳ ರದ್ದತಿಯಿಂದ ರೈತರಿಗೆ ಆಗುವ ಲಾಭ ಏನು ಎಂದು ತಿಳಿಸಬೇಕು. ಸದ್ಯ ರಾಜ್ಯದಲ್ಲಿ ಅನೇಕ ರೈತರು ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ದರಕ್ಕೆ ಕೃಷಿ ಉತ್ಪನ್ನಗಳನ್ನು ಮಾರುತ್ತಿದ್ದಾರೆ’ ಎಂದು ಯಾದವ್ ಹೇಳಿದರು.