ಪಟ್ನಾ: ದೇಶವು ಹಣದುಬ್ಬರದಿಂದ ನಲುಗುತ್ತಿದ್ದು, ನಾವು ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದೇವೆ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ತಿಳಿಸಿದ್ದಾರೆ
ಈ ವಿಚಾರವಾಗಿ ಸೋಮವಾರ ಮಾತನಾಡಿರುವ ಅವರು, 'ಹಣದುಬ್ಬರವು ದೊಡ್ಡ ಸಮಸ್ಯೆಯಾಗಿದೆ. ದೇಶದಲ್ಲಿ ನಿರುದ್ಯೋಗ, ಹಸಿವು ಮತ್ತು ಬಡತನ ವ್ಯಾಪಕವಾಗುತ್ತಿದೆ. ಸಣ್ಣ ವ್ಯಾಪಾರಿಗಳು ನಾಶವಾಗಿದ್ದಾರೆ. ಜಿಡಿಪಿ ಕುಸಿಯುತ್ತಿದೆ. ನಾವು ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದೇವೆ' ಎಂದು ಅವರು ಹೇಳಿದ್ದಾರೆ.
'ಈ ಹಿಂದೆ ಈರುಳ್ಳಿ ಬೆಲೆಯು ಕೆ.ಜಿ.ಗೆ ₹50-60 ತಲುಪಿದ ಸಂದರ್ಭದಲ್ಲಿ ಬಿಜೆಪಿಯವರು ಮಾತನಾಡುತ್ತಿದ್ದರು. ಈಗ ಕೆ.ಜಿ.ಗೆ ₹80 ದಾಟಿದರೂ ಅವರು ಮೌನವಾಗಿದ್ದಾರೆ. ರೈತರು ನಾಶವಾಗುತ್ತಿದ್ದಾರೆ. ಯುವಕರು ನಿರುದ್ಯೋಗಿಗಳಾಗಿದ್ದಾರೆ. ಶಿಕ್ಷಣ, ಉದ್ಯೋಗ ಮತ್ತು ವೈದ್ಯಕೀಯ ಸಹಾಯಕ್ಕಾಗಿ ಜನರು ವಲಸೆ ಹೋಗುತ್ತಿದ್ದಾರೆ' ಎಂದು ಕೇಂದ್ರ ಹಾಗೂ ಬಿಹಾರ ಸರ್ಕಾರಗಳ ವಿರುದ್ಧ ತೇಜಸ್ವಿ ಯಾದವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Those who were speaking about onion when it touched Rs 50-60/kg are now silent when it has crossed Rs 80/kg. Farmers are being destroyed, youth is unemployed, Bihar is poor and people are migrating for education, jobs & medical help. Starvation is on a rise: Tejashwi Yadav, RJD https://t.co/m7B3WpiRXr