<p><strong>ಹೈದರಾಬಾದ್:</strong> ತೆಲಂಗಾಣದಲ್ಲಿ 997 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2.56 ಲಕ್ಷಕ್ಕೆ ಏರಿಕೆಯಾಗಿದೆ. ಅಲ್ಲದೆ ಕೋವಿಡ್ನಿಂದಾಗಿ ಹೊಸದಾಗಿ ಮೂರು ಮಂದಿ ಮೃತಪಟ್ಟಿದ್ದು, ಈವರೆಗೆ ಸೋಂಕಿನಿಂದ 1,397 ಮಂದಿ ಮೃತಪಟ್ಟಿದ್ದಾರೆ ಎಂದು ತೆಲಂಗಾಣ ಸರ್ಕಾರ ಶುಕ್ರವಾರ ತಿಳಿಸಿದೆ.</p>.<p>ತೆಲುಗು ಚಿತ್ರನಟ, ಕೇಂದ್ರದಮಾಜಿಸಚಿವ ಕೆ. ಚಿರಂಜೀವಿ ಅವರಲ್ಲಿ ಸೋಂಕು ದೃಢಪಟ್ಟಿದೆ ಎನ್ನಲಾಗಿತ್ತು.ಆದರೆ ಈ ಬಗ್ಗೆ ಟ್ವಿಟರ್ನಲ್ಲಿ ಸ್ಪಷ್ಟನೆ ನೀಡಿರುವ ಚಿರಂಜೀವಿ ಅವರು, ಮೂರು ಪರೀಕ್ಷೆಗಳನ್ನು ನಡೆಸಿದ ಬಳಿಕ ವೈದ್ಯರು ತಮಗೆ ಕೊರೊನಾ ಸೋಂಕು ತಗುಲಿಯೇ ಇಲ್ಲ ಎಂದು ದೃಢಪಡಿಸಿದ್ದಾರೆ ಎಂದು ಹೇಳಿದ್ದಾರೆ.</p>.<p>ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ(ಜಿಎಚ್ಎಂಸಿ) ವ್ಯಾಪ್ತಿಯಲ್ಲಿ 169 ಪ್ರಕರಣಗಳು ಸೇರಿದಂತೆ ಮೆಡ್ಚಲ್ ಮಲ್ಕಾಜ್ಗಿರಿಯಲ್ಲಿ 85, ರಂಗಾರೆಡ್ಡಿ ಜಿಲ್ಲೆಯಲ್ಲಿ 66 ಹೊಸ ಪ್ರಕರಣಗಳು ವರದಿಯಾಗಿದೆ ಎಂದು ಜಿಎಚ್ಎಂಸಿ ಗುರುವಾರದ ಬುಲೆಟಿನ್ನಲ್ಲಿ ಹೇಳಿದೆ.</p>.<p>ನ.11 ರಂದು 17,094 ಸೋಂಕಿತರು ಚಿಕಿತ್ಸೆಗೆ ಒಳಗಾಗಿದ್ದು, 42,163 ಮಂದಿ ಪರೀಕ್ಷೆಗೆ ಒಳಗಾಗಿದ್ದಾರೆ. ಈವರೆಗೆ ಒಟ್ಟು 48.12 ಲಕ್ಷ ಮಂದಿಯ ಮಾದರಿಯನ್ನು ಪರೀಕ್ಷಿಸಲಾಗಿದೆ.</p>.<p>ತೆಲಂಗಾಣದಲ್ಲಿ ಸಾವಿನ ಪ್ರಮಾಣವು ಶೇಕಡಾ 0.54 ರಷ್ಟಿದ್ದು, ಚೇತರಿಕೆ ಪ್ರಮಾಣ ಶೇ. 92.76 ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತೆಲಂಗಾಣದಲ್ಲಿ 997 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2.56 ಲಕ್ಷಕ್ಕೆ ಏರಿಕೆಯಾಗಿದೆ. ಅಲ್ಲದೆ ಕೋವಿಡ್ನಿಂದಾಗಿ ಹೊಸದಾಗಿ ಮೂರು ಮಂದಿ ಮೃತಪಟ್ಟಿದ್ದು, ಈವರೆಗೆ ಸೋಂಕಿನಿಂದ 1,397 ಮಂದಿ ಮೃತಪಟ್ಟಿದ್ದಾರೆ ಎಂದು ತೆಲಂಗಾಣ ಸರ್ಕಾರ ಶುಕ್ರವಾರ ತಿಳಿಸಿದೆ.</p>.<p>ತೆಲುಗು ಚಿತ್ರನಟ, ಕೇಂದ್ರದಮಾಜಿಸಚಿವ ಕೆ. ಚಿರಂಜೀವಿ ಅವರಲ್ಲಿ ಸೋಂಕು ದೃಢಪಟ್ಟಿದೆ ಎನ್ನಲಾಗಿತ್ತು.ಆದರೆ ಈ ಬಗ್ಗೆ ಟ್ವಿಟರ್ನಲ್ಲಿ ಸ್ಪಷ್ಟನೆ ನೀಡಿರುವ ಚಿರಂಜೀವಿ ಅವರು, ಮೂರು ಪರೀಕ್ಷೆಗಳನ್ನು ನಡೆಸಿದ ಬಳಿಕ ವೈದ್ಯರು ತಮಗೆ ಕೊರೊನಾ ಸೋಂಕು ತಗುಲಿಯೇ ಇಲ್ಲ ಎಂದು ದೃಢಪಡಿಸಿದ್ದಾರೆ ಎಂದು ಹೇಳಿದ್ದಾರೆ.</p>.<p>ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ(ಜಿಎಚ್ಎಂಸಿ) ವ್ಯಾಪ್ತಿಯಲ್ಲಿ 169 ಪ್ರಕರಣಗಳು ಸೇರಿದಂತೆ ಮೆಡ್ಚಲ್ ಮಲ್ಕಾಜ್ಗಿರಿಯಲ್ಲಿ 85, ರಂಗಾರೆಡ್ಡಿ ಜಿಲ್ಲೆಯಲ್ಲಿ 66 ಹೊಸ ಪ್ರಕರಣಗಳು ವರದಿಯಾಗಿದೆ ಎಂದು ಜಿಎಚ್ಎಂಸಿ ಗುರುವಾರದ ಬುಲೆಟಿನ್ನಲ್ಲಿ ಹೇಳಿದೆ.</p>.<p>ನ.11 ರಂದು 17,094 ಸೋಂಕಿತರು ಚಿಕಿತ್ಸೆಗೆ ಒಳಗಾಗಿದ್ದು, 42,163 ಮಂದಿ ಪರೀಕ್ಷೆಗೆ ಒಳಗಾಗಿದ್ದಾರೆ. ಈವರೆಗೆ ಒಟ್ಟು 48.12 ಲಕ್ಷ ಮಂದಿಯ ಮಾದರಿಯನ್ನು ಪರೀಕ್ಷಿಸಲಾಗಿದೆ.</p>.<p>ತೆಲಂಗಾಣದಲ್ಲಿ ಸಾವಿನ ಪ್ರಮಾಣವು ಶೇಕಡಾ 0.54 ರಷ್ಟಿದ್ದು, ಚೇತರಿಕೆ ಪ್ರಮಾಣ ಶೇ. 92.76 ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>