ನವದೆಹಲಿ: ತೆಲಂಗಾಣದ ಕಾಂಗ್ರೆಸ್ ಹಿರಿಯ ನಾಯಕ ಮರ್ರಿ ಶಶಿಧರ್ ರೆಡ್ಡಿ ಶುಕ್ರವಾರ ಬಿಜೆಪಿ ಸೇರ್ಪಡೆಗೊಂಡಿದ್ದು,ರಾಜ್ಯದಲ್ಲಿ ತೆಲಂಗಾಣ ರಾಷ್ಟ್ರೀಯ ಸಮಿತಿಯ ದುರಾಡಳಿತವನ್ನು ತಡೆಯಲು ಕಾಂಗ್ರೆಸ್ ವಿಫಲಗೊಂಡಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ನಿಂದ ಹೊರ ಬಂದ ಅವರು ಇತ್ತೀಚೆಗೆ ನವದೆಹಲಿಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಕೇಂದ್ರ ಸಚಿವರಾದ ಸರ್ಬಾನಂದ ಸೋನಾವಾಲ್ ಮತ್ತು ಜಿ.ಕಿಶನ್ ರೆಡ್ಡಿ ಅವರ ಸಮ್ಮುಖದಲ್ಲಿ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಶಶಿಧರ್ ರೆಡ್ಡಿ ಪಕ್ಷ ಸೇರ್ಪಡೆಗೊಂಡಿದ್ದಾರೆ.