ಈ ಅಕ್ರಮವನ್ನು ವಿರೋಧಿಸಿ ತೆಲಂಗಾಣದ ಕಾಂಗ್ರೆಸ್ ಘಟಕವು ಕೋಕಪೇಟೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ರೇವಂತ ರೆಡ್ಡಿ, ಶಾಸಕ ಸಂಗ ರೆಡ್ಡಿ, ತೆಲಂಗಾಣ ಕಾಂಗ್ರೆಸ್ ಘಟಕದ ಕಾರ್ಯಾಧ್ಯಕ್ಷ ಟಿ. ಜಯಪ್ರಕಾಶ್ ರೆಡ್ಡಿ, ಮಲ್ಲು ಭಟ್ಟಿ, ಮೊಹಮ್ಮದ್ ಆಲಿ ಶಬ್ಬೀರ್ ಸೇರಿದಂತೆ ಹಲವು ಹಿರಿಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.