ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಕೇಂದ್ರ ಸರ್ಕಾರವು ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ಕಲ್ಪಿಸಿದೆ. ಆದರಂತೆ ತೆಲಂಗಾಣ ಸರ್ಕಾರವೂ ಕೂಡ ಮೀಸಲಾತಿಯನ್ನು ಜಾರಿಗೆ ತಂದಿದೆ. ಇದರಿಂದ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ ಒಬಿಸಿ ಮತ್ತು ಆರ್ಥಿಕವಾಗಿ ದುರ್ಬಲ ಮತ್ತು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಸೋಮೇಶ್ ಕುಮಾರ್ ಹೇಳಿದ್ದಾರೆ.