ಶುಕ್ರವಾರ, ಮಾರ್ಚ್ 31, 2023
33 °C
ತೆಲಂಗಾಣ: ಭುಗಿಲೆದ್ದ ರಾಜಭವನ– ಸರ್ಕಾರದ ತಿಕ್ಕಾಟ l ಸಿ.ಎಂಗೆ ರಾಜ್ಯಪಾಲರ ತಿರುಗೇಟು

ರಾಜಭವನ– ಸರ್ಕಾರ ತಿಕ್ಕಾಟ| ಅಭಿವೃದ್ಧಿ ಎಂದರೆ ತೋಟದ ಮನೆಯಲ್ಲ: ಸಿಎಂಗೆ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಅಭಿವೃದ್ಧಿ ಎಂದರೆ ಕೆಲವರಷ್ಟೇ ತೋಟದ ಮನೆ ಹೊಂದು ವುದಲ್ಲ ಬದಲಾಗಿ ಎಲ್ಲಾ ರೈತರು ಮತ್ತು ಸೌಲಭ್ಯವಂಚಿತ ಜನರು ತೋಟ ಮತ್ತು ಮನೆಯನ್ನು ಹೊಂದು ವುದಾಗಿದೆ ಎಂದು ತೆಲಂಗಾಣ ರಾಜ್ಯ ಪಾಲೆ ತಮಿಳ್ಇಸೈ ಸೌಂದರರಾಜನ್‌ ಗುರುವಾರ ಹೇಳಿದ್ದಾರೆ.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ಅವರ ಹೈದರಾಬಾದ್‌ನಿಂದ 60 ಕಿ.ಮೀ. ದೂರದಲ್ಲಿರುವ ವಿಶಾಲವಾದ ತೋಟದ ಮನೆಯನ್ನು ಉದ್ದೇಶಿಸಿ ಈ ಹೇಳಿಕೆ ನೀಡಿದ್ದಾರೆ.

ರಾಜಭವನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ ಸಿ.ಎಂ(ಪಿಟಿಐ ವರದಿ): ತೆಲಂಗಾಣದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಸರ್ಕಾರ ಮತ್ತು ರಾಜ್ಯ ಪಾಲರ ನಡುವಿನ ಭಿನ್ನಾಭಿಪ್ರಾಯ ಮತ್ತೊಮ್ಮೆ ಪ್ರಕಟಗೊಂಡಿದ್ದು, ಗಣರಾಜ್ಯೋತ್ಸವದಅಂಗವಾಗಿ ರಾಜಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಿಂದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ಅವರು ದೂರ ಉಳಿದಿದ್ದಾರೆ.

ಕೇಂದ್ರ ಸರ್ಕಾರ ಹೊರಡಿಸಿರುವ ಸೂಚನೆಗಳ ಪ್ರಕಾರ ಗಣರಾಜ್ಯೋತ್ಸವವನ್ನು ಭವ್ಯವಾಗಿ ಆಚರಿಸಬೇಕು ಎಂದು ಬುಧವಾರ ತೆಲಂಗಾಣ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದ್ದರೂ ಈ ಬೆಳವಣಿಗೆ ನಡೆದಿದೆ.

ಚಂದ್ರಶೇಖರ ರಾವ್‌ ಅವರು ಗಣರಾಜ್ಯೋತ್ಸವದ ಅಂಗವಾಗಿ ತಮ್ಮ ಅಧಿಕೃತ ನಿವಾಸ ಪ್ರಗತಿ ಭವನದಲ್ಲಿ ಧ್ವಜಾರೋಹಣ ಮಾಡಿದರು.

ಕಳೆದ ವರ್ಷ ಸ್ಫೋಟ: ಕಳೆದ ವರ್ಷ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೊಟಕುಗೊಂಡ ಬಳಿಕ ರಾಜ್ಯಪಾಲೆ ಮತ್ತು ಸರ್ಕಾರದ ನಡುವಿನ ಭಿನ್ನಾಭಿಪ್ರಾಯ ಸ್ಫೋಟಗೊಂಡಿತ್ತು. 

2019ರಲ್ಲಿ ರಾಜ್ಯಪಾಲೆಯಾಗಿ ಅಧಿಕಾರ ವಹಿಸಿಕೊಂಡಿರುವ ತಮಿಳ್ಇಸೈ ಅವರು, ತಮ್ಮ ಕಚೇರಿಗೆ ಸಂಬಂಧಿಸಿದಂತೆ ಸರ್ಕಾರವು ಶಿಷ್ಟಾಚಾರಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿದ್ದರು.

ತಾವು ಜಿಲ್ಲೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಅಧಿಕಾರಿಗಳು ಶಿಷ್ಟಾ ಚಾರ ಪಾಲಿಸುತ್ತಿಲ್ಲ ಎಂದು ಉಲ್ಲೇಖಿಸಿದ್ದ ಅವರು, ರಾಜಭವನಕ್ಕೆ ಗೌರವ ನೀಡಬೇಕು ಎಂದಿದ್ದರು. ಈ ಆರೋಪವನ್ನು ತಳ್ಳಿ ಹಾಕಿದ್ದ ಬಿಆರ್‌ಎಸ್‌ ಪಕ್ಷ, ತಮಿಳ್ಇಸೈ ಅವರು ರಾಜ್ಯಪಾಲೆ ಆಗುವುದಕ್ಕಿಂತ ಮೊದಲು ತಮಿಳುನಾಡಿನಲ್ಲಿ ಬಿಜೆಪಿ ಅಧ್ಯಕ್ಷೆಯಾಗಿದ್ದರು ಎಂದು ಹೇಳಿತ್ತು.

ಸರ್ಕಾರವು ನನ್ನ ದೂರವಾಣಿ ಕರೆಗಳನ್ನು ಕದ್ದಾಲಿಸುತ್ತಿರುವ ಸಂಶಯವಿದೆ ಎಂದು ತಮಿಳ್ಇಸೈ ಅವರು ಕಳೆದ ವರ್ಷ ಆರೋಪ ಮಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು