ತೆಲಂಗಾಣ:ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಎಂಎಲ್ಸಿಯಾಗಿ ಆಯ್ಕೆಯಾಗಿದ್ದಾರೆ.
ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆದ ಚುನಾವಣೆಯಲ್ಲಿ ನಿಜಾಮಬಾದ್ದಿಂದ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಕಲ್ವಕುಂಟ್ಲ ಕವಿತಾ ಜಯ ಸಾಧಿಸಿದ್ದಾರೆ. ಎಂಎಲ್ಸಿ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆದಿತ್ತು. ಸೋಮವಾರ ಫಲಿತಾಂಶ ಪ್ರಕಟಿಸಲಾಗಿದೆ.
ಒಟ್ಟು 823 ಮತಗಳಲ್ಲಿ, ಕವಿತಾ 728 ಮತ ಗಳಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಕ್ರಮವಾಗಿ 56 ಮತ್ತು 29 ಮತ ಗಳಿಸಿದ್ದಾರೆ. 10ಮತಗಳು ತಿರಸ್ಕೃತಗೊಂಡವು.