ಕೃಷಿ ಕಾಯ್ದೆಗಳ ರದ್ದತಿ ನಿರ್ಧಾರವು ರೈತರ ಹೋರಾಟಕ್ಕೆ ಸಂದ ಜಯ ಎಂದು ಬಣ್ಣಿಸಿರುವ ರಾವ್, ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಪ್ರತಿಭಟನಾನಿರತ ರೈತರ ಮೇಲೆ ಹಾಗೂ ಅವರನ್ನು ಬೆಂಬಲಿಸಿದವರ ಮೇಲೆ ದೇಶದ್ರೋಹವೂ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ದೂರಿದ್ದಾರೆ.