ಆಂಧ್ರಪ್ರದೇಶ | ಪಕ್ಷದ ನಾಯಕನ ಕೊಲೆ: ಸರ್ಕಾರದ ವಿರುದ್ಧ ಕಿಡಿಕಾರಿದ ಟಿಡಿಪಿ

ಹೈದರಾಬಾದ್: ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಪುರಂಶೆಟ್ಟಿ ಅಂಕುಲು ಅವರನ್ನು ಭಾನುವಾರ ಕೊಲೆ ಮಾಡಲಾಗಿದ್ದು, ಗುಂಟೂರು ಜಿಲ್ಲೆಯ ದಾಚೆಪಲ್ಲಿ ಪಟ್ಟಣದಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಶವ ಪತ್ತೆಯಾಗಿದೆ.
ಚಾಕುವಿನಿಂದ ಅಂಕುಲು ಅವರ ಕುತ್ತಿಗೆ ಸೀಳಲಾಗಿದೆ.
ಈ ಸಂಬಂಧ ಆಡಳಿತ ಪಕ್ಷ ಯುವಜನ ಶ್ರಮಿಕ ರೈತು ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ವಿರುದ್ಧ ಕಿಡಿಕಾರಿರುವ ಟಿಡಿಪಿ ನಾಯಕರು, ಪೊಲೀಸರು ಸರ್ಕಾರದ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟಿಸಿದ್ದಾರೆ. ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ವರದಿಯಾಗಿದೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.