<p><strong>ತಂಜಾವೂರು (ಪಿಟಿಐ):</strong>ತಂಜಾವೂರು ಜಿಲ್ಲೆಯಕಳಿಮೆಡುವಿನ ಅಪ್ಪಾರ್ ದೇವಸ್ಥಾನದ ರಥಕ್ಕೆ ಬುಧವಾರ ಬೆಳಿಗ್ಗೆ ಮೆರವಣಿಗೆ ಸಂದರ್ಭದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಮೂವರು ಹದಿಹರೆಯದ ಬಾಲಕರು ಸೇರಿದಂತೆ ಒಟ್ಟು 11 ಮಂದಿ ಭಕ್ತರು ಮೃತಪಟ್ಟಿದ್ದಾರೆ.ಈ ದುರಂತದಲ್ಲಿ ಮಹಿಳೆ ಸೇರಿ 17 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅಪ್ಪಾರ್ ದೇವಸ್ಥಾನದ ರಥವು ಬುಧವಾರ ಮುಂಜಾನೆ ತಂಜಾವೂರು– ಬೂದಲೂರು ರಸ್ತೆಯಲ್ಲಿ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಥ ತಿರುವು ಪಡೆಯುವಾಗ ಕೆಲ ಅಡಚಣೆ ಎದುರಿಸಿತು. ಆಗ ಭಕ್ತರು ರಥವನ್ನು ತಿರುಗಿಸಲು ಪ್ರಯತ್ನಿಸಿದಾಗ ಅದರ ಮೇಲ್ಭಾಗ ವಿದ್ಯುತ್ ತಂತಿಯ ಸಂಪರ್ಕಕ್ಕೆ ಬಂದಿತು. ರಥದ ಬಳಿ ಇದ್ದ ಭಕ್ತರು ವಿದ್ಯುತ್ ಆಘಾತದಿಂದ ಪಕ್ಕಕ್ಕೆ ಎಸೆಯಲ್ಪಟ್ಟರೆ, ರಥ ಸಂಪೂರ್ಣ ಉರಿದು ಭಸ್ಮವಾಯಿತು ಎಂದು ಪೊಲೀಸ್ ಮತ್ತು ಜಿಲ್ಲಾ ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪರಿಹಾರ:ಪ್ರಧಾನಿ ನರೇಂದ್ರ ಮೋದಿ ಅವರು ಮೃತಪಟ್ಟವರಕುಟುಂಬಸ್ಥರಿಗೆ ತಲಾ ₹2 ಲಕ್ಷ ಹಾಗೂ ಗಾಯ ಗೊಂಡವರಿಗೆ ತಲಾ ₹50 ಸಾವಿರ ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ಘೋಷಿಸಿ ದ್ದಾರೆ.ಮುಖ್ಯಮಂತ್ರಿ ಸ್ಟಾಲಿನ್ ಅವರು ಮೃತರ ಕುಟುಂಬಸ್ಥರಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ.</p>.<p>ತನಿಖೆ: ‘ಘಟನೆ ಕುರಿತು ತನಿಖೆ ನಡೆ ಸಲು ಹಾಗೂ ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದ ರೀತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸು ಮಾಡಲು ಮುಖ್ಯಮಂತ್ರಿ ಸ್ಟಾಲಿನ್ ಅವರು ಏಕ ಸದಸ್ಯ ಆಯೋಗ ರಚಿಸುವುದಾಗಿ ಘೋಷಿಸಿದ್ದಾರೆ’ ಎಂದು ಇಂಧನ ಸಚಿವ ವಿ.ಸೆಂಥಿಲ್ ಬಾಲಾಜಿ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಂಜಾವೂರು (ಪಿಟಿಐ):</strong>ತಂಜಾವೂರು ಜಿಲ್ಲೆಯಕಳಿಮೆಡುವಿನ ಅಪ್ಪಾರ್ ದೇವಸ್ಥಾನದ ರಥಕ್ಕೆ ಬುಧವಾರ ಬೆಳಿಗ್ಗೆ ಮೆರವಣಿಗೆ ಸಂದರ್ಭದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಮೂವರು ಹದಿಹರೆಯದ ಬಾಲಕರು ಸೇರಿದಂತೆ ಒಟ್ಟು 11 ಮಂದಿ ಭಕ್ತರು ಮೃತಪಟ್ಟಿದ್ದಾರೆ.ಈ ದುರಂತದಲ್ಲಿ ಮಹಿಳೆ ಸೇರಿ 17 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅಪ್ಪಾರ್ ದೇವಸ್ಥಾನದ ರಥವು ಬುಧವಾರ ಮುಂಜಾನೆ ತಂಜಾವೂರು– ಬೂದಲೂರು ರಸ್ತೆಯಲ್ಲಿ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಥ ತಿರುವು ಪಡೆಯುವಾಗ ಕೆಲ ಅಡಚಣೆ ಎದುರಿಸಿತು. ಆಗ ಭಕ್ತರು ರಥವನ್ನು ತಿರುಗಿಸಲು ಪ್ರಯತ್ನಿಸಿದಾಗ ಅದರ ಮೇಲ್ಭಾಗ ವಿದ್ಯುತ್ ತಂತಿಯ ಸಂಪರ್ಕಕ್ಕೆ ಬಂದಿತು. ರಥದ ಬಳಿ ಇದ್ದ ಭಕ್ತರು ವಿದ್ಯುತ್ ಆಘಾತದಿಂದ ಪಕ್ಕಕ್ಕೆ ಎಸೆಯಲ್ಪಟ್ಟರೆ, ರಥ ಸಂಪೂರ್ಣ ಉರಿದು ಭಸ್ಮವಾಯಿತು ಎಂದು ಪೊಲೀಸ್ ಮತ್ತು ಜಿಲ್ಲಾ ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪರಿಹಾರ:ಪ್ರಧಾನಿ ನರೇಂದ್ರ ಮೋದಿ ಅವರು ಮೃತಪಟ್ಟವರಕುಟುಂಬಸ್ಥರಿಗೆ ತಲಾ ₹2 ಲಕ್ಷ ಹಾಗೂ ಗಾಯ ಗೊಂಡವರಿಗೆ ತಲಾ ₹50 ಸಾವಿರ ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ಘೋಷಿಸಿ ದ್ದಾರೆ.ಮುಖ್ಯಮಂತ್ರಿ ಸ್ಟಾಲಿನ್ ಅವರು ಮೃತರ ಕುಟುಂಬಸ್ಥರಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ.</p>.<p>ತನಿಖೆ: ‘ಘಟನೆ ಕುರಿತು ತನಿಖೆ ನಡೆ ಸಲು ಹಾಗೂ ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದ ರೀತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸು ಮಾಡಲು ಮುಖ್ಯಮಂತ್ರಿ ಸ್ಟಾಲಿನ್ ಅವರು ಏಕ ಸದಸ್ಯ ಆಯೋಗ ರಚಿಸುವುದಾಗಿ ಘೋಷಿಸಿದ್ದಾರೆ’ ಎಂದು ಇಂಧನ ಸಚಿವ ವಿ.ಸೆಂಥಿಲ್ ಬಾಲಾಜಿ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>