ಸಮಾಜ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶಿವದಾಸನ್ ಪಿಳ್ಳೈ ಅವರು ವರ್ಷದ ಹಿಂದೆ ಮಂದಿರ ನಿರ್ಮಿಸಿದ್ದಾರೆ. ಮೂರು ಸೆಂಟ್ಸ್ ಜಾಗದಲ್ಲಿರುವ ಮಂದಿರದಲ್ಲಿ ಮಹಾತ್ಮಗಾಂಧಿ, ಸ್ವಾಮಿ ವಿವೇಕಾನಂದ, ಬಿ.ಆರ್.ಅಂಬೇಡ್ಕರ್ ಮತ್ತು ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫ್ ಝಾಯಿ ಅವರ ಭಾವಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಗರ್ಭಗುಡಿಯಲ್ಲಿ ಸಂವಿಧಾನದ ಪೀಠಿಕೆ ಕೆತ್ತಲಾಗಿದೆ.