ಜಮ್ಮು: ಇಲ್ಲಿನ ಹೊರವಲಯದ ಸಿಧ್ರಾ ಪ್ರದೇಶದಲ್ಲಿ ದಶಕಗಳಷ್ಟು ಹಳೆಯದಾದ ಹಿಂದೂ ದೇವಾಲಯದ ದೇವರ ಮೂರ್ತಿಯನ್ನು ದುಷ್ಕರ್ಮಿಗಳು ಧ್ವಂಸ ಮಾಡಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.
‘ದೇವಾಲಯದ ಮುಂಭಾಗದ ದೇವರ ಮೂರ್ತಿ ಹಾಗೂ ಗಣೇಶ ಮೂರ್ತಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.
‘ಶನಿವಾರ ಮುಂಜಾನೆ ಅರ್ಚಕರು ದೇವಾಲಯಕ್ಕೆ ಹೋದಾಗ ಮೂರ್ತಿಗಳು ಧ್ವಂಸಗೊಂಡಿರುವುದು ಬೆಳಕಿಗೆ ಬಂದಿದೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳ ತಂಡವು ತನಿಖೆ ಕೈಗೊಂಡಿದೆ. ಶುಕ್ರವಾರ ಮಧ್ಯರಾತ್ರಿ ದುಷ್ಕರ್ಮಿಗಳು ಈ ದುಷ್ಕೃತ್ಯ ನಡೆಸಿರಬಹುದು’ ಎಂದು ಅಧಿಕಾರಿಗಳು ತಿಳಿಸಿದರು.