<p><strong>ನವದೆಹಲಿ:</strong> ಸಿಂಘು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯರು ಎಂದು ಹೇಳಿಕೊಳ್ಳುವ ಜನರು ಹಾಗೂ ಪ್ರತಿಭಟನಾ ನಿರತ ರೈತರ ಮಧ್ಯೆ ಗಲಾಟೆ ನಡೆದಿದೆ.</p>.<p>ಈ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿರುವ ಘಟನೆಗಳು ವರದಿಯಾಗಿದೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರಲ್ಲದೆಅಶ್ರುವಾಯು ಪ್ರಯೋಗಿಸಿದರು.</p>.<p>ಪೊಲೀಸ್ ಬ್ಯಾರಿಕೇಡ್ಗಳನ್ನು ಧ್ವಂಸಗೊಳಿಸಲಾಗಿದೆ. ಸ್ಥಳೀಯರೆಂದು ಹೇಳಿಕೊಳ್ಳುತ್ತಿರುವ ಜನರು ರೈತರ ವಿರುದ್ಧ ಘೋಷಣೆಗಳನ್ನು ಕೂಗಿ, ಸ್ಥಳ ಖಾಲಿ ಮಾಡುವಂತೆ ಪ್ರತಿಭಟಿಸಿದರು.</p>.<p>ಖಾಲಿಸ್ತಾನ್ ವಿರೋಧಿ ಘೋಷಣೆ, ಭಾರತದ ತ್ರಿವರ್ಣ ಪತಾಕೆಗೆ ಆದ ಅವಮಾನವನ್ನು ದೇಶ ಎಂದಿಗೂ ಸಹಿಸುವುದಿಲ್ಲಮುಂತಾದಘೋಷಣೆಗಳನ್ನು ಸ್ಥಳೀಯರುಕೂಗಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/delhi-heavy-security-deployment-continues-at-tikri-border-where-farmers-are-protesting-against-farm-800575.html" itemprop="url">ದೆಹಲಿ: ಮುಂದುವರಿದ ರೈತರ ಪ್ರತಿಭಟನೆ, ಟಿಕ್ರಿ ಗಡಿಯಲ್ಲಿ ಭಾರಿ ಭದ್ರತೆ </a></p>.<p>ಕಳೆದ ದಿನವಷ್ಟೇಪ್ರತಿಭಟನಾ ನಿರತ ರೈತರು ಸ್ಥಳ ಬಿಟ್ಟು ತೆರಳುವಂತೆ ಸ್ಥಳೀಯರುಪ್ರತಿಭಟನೆ ನಡೆಸಿದ್ದರು.</p>.<p>ಗಣರಾಜ್ಯೋತ್ಸವ ದಿನದಂದು ನಡೆಸಲಾದ ಟ್ರ್ಯಾಕ್ಟರ್ ಜಾಥಾದಲ್ಲಿ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ದೆಹಲಿ ಹರಿಯಾಣದ ಸಿಂಘು ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.</p>.<p>ಕೇಂದ್ರ ಸರ್ಕಾರದ ನೂತನ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ನವೆಂಬರ್ 26ರಿಂದಲೇ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಿಂಘು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯರು ಎಂದು ಹೇಳಿಕೊಳ್ಳುವ ಜನರು ಹಾಗೂ ಪ್ರತಿಭಟನಾ ನಿರತ ರೈತರ ಮಧ್ಯೆ ಗಲಾಟೆ ನಡೆದಿದೆ.</p>.<p>ಈ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿರುವ ಘಟನೆಗಳು ವರದಿಯಾಗಿದೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರಲ್ಲದೆಅಶ್ರುವಾಯು ಪ್ರಯೋಗಿಸಿದರು.</p>.<p>ಪೊಲೀಸ್ ಬ್ಯಾರಿಕೇಡ್ಗಳನ್ನು ಧ್ವಂಸಗೊಳಿಸಲಾಗಿದೆ. ಸ್ಥಳೀಯರೆಂದು ಹೇಳಿಕೊಳ್ಳುತ್ತಿರುವ ಜನರು ರೈತರ ವಿರುದ್ಧ ಘೋಷಣೆಗಳನ್ನು ಕೂಗಿ, ಸ್ಥಳ ಖಾಲಿ ಮಾಡುವಂತೆ ಪ್ರತಿಭಟಿಸಿದರು.</p>.<p>ಖಾಲಿಸ್ತಾನ್ ವಿರೋಧಿ ಘೋಷಣೆ, ಭಾರತದ ತ್ರಿವರ್ಣ ಪತಾಕೆಗೆ ಆದ ಅವಮಾನವನ್ನು ದೇಶ ಎಂದಿಗೂ ಸಹಿಸುವುದಿಲ್ಲಮುಂತಾದಘೋಷಣೆಗಳನ್ನು ಸ್ಥಳೀಯರುಕೂಗಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/delhi-heavy-security-deployment-continues-at-tikri-border-where-farmers-are-protesting-against-farm-800575.html" itemprop="url">ದೆಹಲಿ: ಮುಂದುವರಿದ ರೈತರ ಪ್ರತಿಭಟನೆ, ಟಿಕ್ರಿ ಗಡಿಯಲ್ಲಿ ಭಾರಿ ಭದ್ರತೆ </a></p>.<p>ಕಳೆದ ದಿನವಷ್ಟೇಪ್ರತಿಭಟನಾ ನಿರತ ರೈತರು ಸ್ಥಳ ಬಿಟ್ಟು ತೆರಳುವಂತೆ ಸ್ಥಳೀಯರುಪ್ರತಿಭಟನೆ ನಡೆಸಿದ್ದರು.</p>.<p>ಗಣರಾಜ್ಯೋತ್ಸವ ದಿನದಂದು ನಡೆಸಲಾದ ಟ್ರ್ಯಾಕ್ಟರ್ ಜಾಥಾದಲ್ಲಿ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ದೆಹಲಿ ಹರಿಯಾಣದ ಸಿಂಘು ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.</p>.<p>ಕೇಂದ್ರ ಸರ್ಕಾರದ ನೂತನ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ನವೆಂಬರ್ 26ರಿಂದಲೇ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>