ಚೆನ್ನೈ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ರಾಜಪಕ್ಸ ಕುಟುಂಬದ ವಿರುದ್ಧ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯಿಂದಾಗಿಪರಿಸ್ಥಿತಿ ಕೈಮೀರುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ರಾಮನಾಥಪುರಂ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಿದ್ದು, ತೀವ್ರ ಕಟ್ಟೆಚ್ಚರ ವಹಿಸಿದೆ.