‘ಹೆಚ್ಚಿನ ಆಸ್ಪತ್ರೆಗಳಲ್ಲಿ ‘ಲಸಿಕೆ ಇಲ್ಲ’ ಎಂಬ ಬೋರ್ಡ್ಗಳನ್ನು ಹಾಕಲಾಗಿದೆ. ಆದರೂ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಲಸಿಕೆ ಪೂರೈಕೆಯಲ್ಲಿ ಕೊರತೆಯಿಲ್ಲ ಎಂದು ಹೇಳುತ್ತಿದ್ದಾರೆ. ನೀವು ಸಚಿವರ ಮಾತನ್ನು ನಂಬಿ. ನಿಜವಾಗಿಯೂ ನಮ್ಮ ದೇಶದಲ್ಲಿ ಲಸಿಕೆ, ಆಮ್ಲಜನಕ, ರೆಮ್ಡಿಸಿವಿರ್, ಹಾಸಿಗೆಗಳು, ವೈದ್ಯರು, ನರ್ಸ್ಗಳ ಕೊರತೆಯಿಲ್ಲ. ನಮ್ಮಲ್ಲಿ ಕೇವಲ ರೋಗಿಗಳ ಕೊರತೆಯಿದೆ. ದೇಶಕ್ಕೆ ಎದುರಾಗಿರುವ ಈ ಪರಿಸ್ಥಿತಿಗೆ ಕೇಂದ್ರ ಸರ್ಕಾರವೇ ಕಾರಣ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.