ಸಂಸದ ಶಶಿ ತರೂರ್ ಅವರು, ‘ಪಕ್ಷಕ್ಕೆ ಚುನಾವಣೆಯು ಒಳ್ಳೆಯ ಬೆಳವಣಿಗೆ’ ಎಂದು ಹೇಳುವ ಮೂಲಕ ತಮ್ಮ ಸ್ಪರ್ಧೆಯ ಕುರಿತ ಬಯಕೆಯನ್ನು ತೋರ್ಪಡಿಸಿದ್ದರು. ಮಲಯಾಳ ಪತ್ರಿಕೆ ‘ಮಾತೃಭೂಮಿ’ಗೆ ಬರೆದ ಲೇಖನವೊಂದರಲ್ಲಿ ಅವರು, ‘ಮುಕ್ತ ಮತ್ತು ನ್ಯಾಯಸಮ್ಮತ’ವಾಗಿ ಅಧ್ಯಕ್ಷ ಚುನಾವಣೆ ನಡೆಯಬೇಕು. ಅಧ್ಯಕ್ಷ ಸ್ಥಾನದ ಚುನಾವಣೆ ಜೊತೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಗೂ ಚುನಾವಣೆ ನಡೆದಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅಭಿಪ್ರಾಯಪಟ್ಟಿದ್ದಾರೆ.