ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿರುವ ಅವರು, ವಯೋಮಿತಿ ಬದಲಾವಣೆಯಿಂದ ಐದರಿಂದ ಆರು ವರ್ಷದವರೆಗಿನ ಸಾಕಷ್ಟು ಮಕ್ಕಳು ಕೇಂದ್ರೀಯ ವಿದ್ಯಾಲಯಕ್ಕೆ ಪ್ರವೇಶ ಪಡೆಯಲು ಅನರ್ಹರಾಗುತ್ತಾರೆ. ಆದ್ದರಿಂದ ಈ ನಿರ್ಧಾರದಿಂದ ಕೇಂದ್ರ ಸರ್ಕಾರ ಹಿಂದೆ ಸರಿಯಬೇಕೆಂದು ಆಗ್ರಹಿಸಿದ್ದಾರೆ.