<p>ನವದೆಹಲಿ: ಭಾರತದ ಇತಿಹಾಸದಲ್ಲಿ ದೇಶ ವಿಭಜನೆಯ ಅಮಾನವೀಯ ಅಧ್ಯಾಯವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.</p>.<p>1947ರಲ್ಲಿ ದೇಶ ವಿಭಜನೆ ಸಂದರ್ಭದಲ್ಲಿ ಸಾವು, ನೋವು ಅನುಭವಿಸಿದ್ದ ಲಕ್ಷಾಂತರ ಜನರಿಗೆ ನಮನ ಸಲ್ಲಿಸಿರುವ ಅಮಿತ್ ಶಾ, ಭಾರತದ ಇತಿಹಾಸದಲ್ಲಿ ದೇಶ ವಿಭಜನೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/karnataka-news/president-medal-for-karnataka-18-police-963158.html" itemprop="url">ಅತ್ಯುತ್ತಮ ಸೇವೆಗಾಗಿ ರಾಜ್ಯದ 18ಪೊಲೀಸರಿಗೆ ರಾಷ್ಟ್ರಪತಿ ಪದಕ: ಪಟ್ಟಿ ಇಲ್ಲಿದೆ.. </a></p>.<p>ದೇಶ ವಿಭಜನೆಯ ಭಯಾನಕ ನೆನಪಿನ ದಿನವು ಯುವ ಪೀಳಿಗೆಗೆ ದೇಶವಾಸಿಗಳು ಅನುಭವಿಸಿದ್ದ ಹಿಂಸೆ ಹಾಗೂ ನೋವನ್ನು ನೆನಪಿಸಲಿದೆ. ಅಲ್ಲದೆ ಶಾಶ್ವತವಾಗಿ ಶಾಂತಿ ಕಾಪಾಡಿಕೊಂಡು ಸೌಹಾರ್ದತೆಯಿಂದ ಬದುಕಲು ಪ್ರೇರಣೆ ನೀಡಲಿದೆ ಎಂದು ಹೇಳಿದ್ದಾರೆ.</p>.<p>ಹಿಂಸಾಚಾರ ಹಾಗೂ ದ್ವೇಷದಿಂದಾಗಿ ಲಕ್ಷಾಂತರ ಮಂದಿ ಜೀವ ಕಳೆದುಕೊಂಡಿದ್ದರು. ಅಸಂಖ್ಯಾತ ಜನರು ಸ್ಥಳಾಂತರಗೊಂಡಿದ್ದರು ಎಂದು ಅಮಿತ್ ಶಾ ಹೇಳಿದರು.</p>.<p>ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ, ದೇಶ ವಿಭಜನೆ ವೇಳೆ ಜನರ ತ್ಯಾಗದ ನೆನಪಿಗಾಗಿ ಆಗಸ್ಟ್ 14 ಅನ್ನು 'ದೇಶ ವಿಭಜನೆಯ ಭಯಾನಕ ನೆನಪಿನ ದಿನ' ಎಂದು ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಭಾರತದ ಇತಿಹಾಸದಲ್ಲಿ ದೇಶ ವಿಭಜನೆಯ ಅಮಾನವೀಯ ಅಧ್ಯಾಯವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.</p>.<p>1947ರಲ್ಲಿ ದೇಶ ವಿಭಜನೆ ಸಂದರ್ಭದಲ್ಲಿ ಸಾವು, ನೋವು ಅನುಭವಿಸಿದ್ದ ಲಕ್ಷಾಂತರ ಜನರಿಗೆ ನಮನ ಸಲ್ಲಿಸಿರುವ ಅಮಿತ್ ಶಾ, ಭಾರತದ ಇತಿಹಾಸದಲ್ಲಿ ದೇಶ ವಿಭಜನೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/karnataka-news/president-medal-for-karnataka-18-police-963158.html" itemprop="url">ಅತ್ಯುತ್ತಮ ಸೇವೆಗಾಗಿ ರಾಜ್ಯದ 18ಪೊಲೀಸರಿಗೆ ರಾಷ್ಟ್ರಪತಿ ಪದಕ: ಪಟ್ಟಿ ಇಲ್ಲಿದೆ.. </a></p>.<p>ದೇಶ ವಿಭಜನೆಯ ಭಯಾನಕ ನೆನಪಿನ ದಿನವು ಯುವ ಪೀಳಿಗೆಗೆ ದೇಶವಾಸಿಗಳು ಅನುಭವಿಸಿದ್ದ ಹಿಂಸೆ ಹಾಗೂ ನೋವನ್ನು ನೆನಪಿಸಲಿದೆ. ಅಲ್ಲದೆ ಶಾಶ್ವತವಾಗಿ ಶಾಂತಿ ಕಾಪಾಡಿಕೊಂಡು ಸೌಹಾರ್ದತೆಯಿಂದ ಬದುಕಲು ಪ್ರೇರಣೆ ನೀಡಲಿದೆ ಎಂದು ಹೇಳಿದ್ದಾರೆ.</p>.<p>ಹಿಂಸಾಚಾರ ಹಾಗೂ ದ್ವೇಷದಿಂದಾಗಿ ಲಕ್ಷಾಂತರ ಮಂದಿ ಜೀವ ಕಳೆದುಕೊಂಡಿದ್ದರು. ಅಸಂಖ್ಯಾತ ಜನರು ಸ್ಥಳಾಂತರಗೊಂಡಿದ್ದರು ಎಂದು ಅಮಿತ್ ಶಾ ಹೇಳಿದರು.</p>.<p>ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ, ದೇಶ ವಿಭಜನೆ ವೇಳೆ ಜನರ ತ್ಯಾಗದ ನೆನಪಿಗಾಗಿ ಆಗಸ್ಟ್ 14 ಅನ್ನು 'ದೇಶ ವಿಭಜನೆಯ ಭಯಾನಕ ನೆನಪಿನ ದಿನ' ಎಂದು ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>