<p><strong>ತಿರುವನಂತಪುರಂ: </strong>ದೇಶದಾದ್ಯಂತ ಕೋವಿಡ್-19 ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ 103 ವರ್ಷದ ವ್ಯಕ್ತಿಯೊಬ್ಬರು ಕೋವಿಡ್-19ನಿಂದ ಚೇತರಿಸಿಕೊಂಡಿದ್ದು, ಮಂಗಳವಾರ ಕೇರಳದ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>ಕೋವಿಡ್-19 ಸೋಂಕು ತಗುಲಿದ್ದ ಅಲುವಾ ಮೂಲದ ವ್ಯಕ್ತಿ ಎರ್ನಾಕುಲಂನ ಕಲಾಮಸ್ಸೆರಿ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈಗ ಸೋಂಕಿನಿಂದ ಗುಣಮುಖರಾಗಿರುವುದರಿಂದಾಗಿ ಆಸ್ಪತ್ರೆಯ ಸಿಬ್ಬಂದಿ ಹೂವುಗಳನ್ನು ನೀಡುವ ಮೂಲಕ ಬೀಳ್ಕೊಟ್ಟಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/two-existing-drugs-prevent-covid-19-in-human-cells-study-754291.html" itemprop="url">ಕೊರೊನಾ ವೈರಸ್ ಸೋಂಕಿನಿಂದ ಜೀವಕೋಶಗಳನ್ನು ರಕ್ಷಿಸುವ ಎರಡು ಔಷಧಗಳ ಅಭಿವೃದ್ಧಿ </a></p>.<p>ಜುಲೈ 28 ರಂದು ತೀವ್ರ ಜ್ವರ ಮತ್ತು ದೇಹದಲ್ಲಿ ನೋವು ಕಾಣಿಸಿಕೊಂಡ ಬಳಿಕ ಅವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಸೋಂಕು ತಗುಲಿರುವುದು ದೃಢಪಟ್ಟ ಅವರನ್ನು ಕಲಾಮಸ್ಸೆರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಅವರಿಗೆ ಯಾವುದೇ ಗಂಭೀರ ಲಕ್ಷಣಗಳು ಕಂಡುಬಂದಿಲ್ಲ. ಆದರೂ, ಅವರ ವೃದ್ಧಾಪ್ಯವನ್ನು ಪರಿಗಣಿಸಿ ವಿಶೇಷ ವೈದ್ಯಕೀಯ ತಂಡವು ಚಿಕಿತ್ಸೆ ನೀಡಿದೆ. ರೋಗ ಪತ್ತೆಯಾದ 20 ದಿನಗಳಲ್ಲಿ ಅವರು ಗುಣಮುಖರಾಗಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/chitradurga/elder-women-cured-covid-19-749941.html?fbclid=IwAR3Ts7DA5dNOjN1GEJzeb3YsQbgP28iUwc93HZJtXSt-smxPItjthTlm4P0" target="_blank">ಚಿತ್ರದುರ್ಗ | ಕೋವಿಡ್ ಜಯಿಸಿದ 110 ವರ್ಷದ ಅಜ್ಜಿ</a></p>.<p>ಆನತ ಪತ್ನಿ ಮತ್ತು ಪುತ್ರರ ವರದಿ ನೆಗೆಟಿವ್ ಬಂದ ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.</p>.<p>'ನಾವು ವೃದ್ಧ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಮತ್ತು ಗುಣಪಡಿಸುತ್ತಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ' ಎಂದು ರಾಜ್ಯ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಹೇಳಿದ್ದಾರೆ.</p>.<p>ಕೋವಿಡ್-19 ಸೋಂಕಿನಿಂದಾಗಿ ಕೊಲ್ಲಂನ ಪರಿಪ್ಪಳ್ಳಿ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾದ 105 ವರ್ಷದ ಮಹಿಳೆ ಗುಣಮುಖರಾದ ಬಳಿಕೆ ಇತ್ತೀಚೆಗೆ ಅವರನ್ನು ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ 93 ಮತ್ತು 88 ವರ್ಷದ ದಂಪತಿಗೆ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಯಿತು ಮತ್ತು ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ ಬಿಡುಗಡೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ: </strong>ದೇಶದಾದ್ಯಂತ ಕೋವಿಡ್-19 ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ 103 ವರ್ಷದ ವ್ಯಕ್ತಿಯೊಬ್ಬರು ಕೋವಿಡ್-19ನಿಂದ ಚೇತರಿಸಿಕೊಂಡಿದ್ದು, ಮಂಗಳವಾರ ಕೇರಳದ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>ಕೋವಿಡ್-19 ಸೋಂಕು ತಗುಲಿದ್ದ ಅಲುವಾ ಮೂಲದ ವ್ಯಕ್ತಿ ಎರ್ನಾಕುಲಂನ ಕಲಾಮಸ್ಸೆರಿ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈಗ ಸೋಂಕಿನಿಂದ ಗುಣಮುಖರಾಗಿರುವುದರಿಂದಾಗಿ ಆಸ್ಪತ್ರೆಯ ಸಿಬ್ಬಂದಿ ಹೂವುಗಳನ್ನು ನೀಡುವ ಮೂಲಕ ಬೀಳ್ಕೊಟ್ಟಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/two-existing-drugs-prevent-covid-19-in-human-cells-study-754291.html" itemprop="url">ಕೊರೊನಾ ವೈರಸ್ ಸೋಂಕಿನಿಂದ ಜೀವಕೋಶಗಳನ್ನು ರಕ್ಷಿಸುವ ಎರಡು ಔಷಧಗಳ ಅಭಿವೃದ್ಧಿ </a></p>.<p>ಜುಲೈ 28 ರಂದು ತೀವ್ರ ಜ್ವರ ಮತ್ತು ದೇಹದಲ್ಲಿ ನೋವು ಕಾಣಿಸಿಕೊಂಡ ಬಳಿಕ ಅವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಸೋಂಕು ತಗುಲಿರುವುದು ದೃಢಪಟ್ಟ ಅವರನ್ನು ಕಲಾಮಸ್ಸೆರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಅವರಿಗೆ ಯಾವುದೇ ಗಂಭೀರ ಲಕ್ಷಣಗಳು ಕಂಡುಬಂದಿಲ್ಲ. ಆದರೂ, ಅವರ ವೃದ್ಧಾಪ್ಯವನ್ನು ಪರಿಗಣಿಸಿ ವಿಶೇಷ ವೈದ್ಯಕೀಯ ತಂಡವು ಚಿಕಿತ್ಸೆ ನೀಡಿದೆ. ರೋಗ ಪತ್ತೆಯಾದ 20 ದಿನಗಳಲ್ಲಿ ಅವರು ಗುಣಮುಖರಾಗಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/chitradurga/elder-women-cured-covid-19-749941.html?fbclid=IwAR3Ts7DA5dNOjN1GEJzeb3YsQbgP28iUwc93HZJtXSt-smxPItjthTlm4P0" target="_blank">ಚಿತ್ರದುರ್ಗ | ಕೋವಿಡ್ ಜಯಿಸಿದ 110 ವರ್ಷದ ಅಜ್ಜಿ</a></p>.<p>ಆನತ ಪತ್ನಿ ಮತ್ತು ಪುತ್ರರ ವರದಿ ನೆಗೆಟಿವ್ ಬಂದ ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.</p>.<p>'ನಾವು ವೃದ್ಧ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಮತ್ತು ಗುಣಪಡಿಸುತ್ತಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ' ಎಂದು ರಾಜ್ಯ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಹೇಳಿದ್ದಾರೆ.</p>.<p>ಕೋವಿಡ್-19 ಸೋಂಕಿನಿಂದಾಗಿ ಕೊಲ್ಲಂನ ಪರಿಪ್ಪಳ್ಳಿ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾದ 105 ವರ್ಷದ ಮಹಿಳೆ ಗುಣಮುಖರಾದ ಬಳಿಕೆ ಇತ್ತೀಚೆಗೆ ಅವರನ್ನು ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ 93 ಮತ್ತು 88 ವರ್ಷದ ದಂಪತಿಗೆ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಯಿತು ಮತ್ತು ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ ಬಿಡುಗಡೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>