ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಉದ್ಯೋಗ ಕ್ಷೇತ್ರದ ಬೆನ್ನೆಲುಬು ಮುರಿದ ಪ್ರಧಾನಿ ಮೋದಿ: ರಾಹುಲ್ ಗಾಂಧಿ

Last Updated 25 ಫೆಬ್ರುವರಿ 2022, 10:50 IST
ಅಕ್ಷರ ಗಾತ್ರ

ಅಮೇಥಿ: ದೇಶದ ಉದ್ಯೋಗ ಕ್ಷೇತ್ರದ ಬೆನ್ನೆಲುಬನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸ್ನೇಹಿತರು ಮುರಿದಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಮೇಥಿಯಲ್ಲಿ ಪ್ರಚಾರದಲ್ಲಿ ಭಾಗವಹಿಸಿರುವ ರಾಹುಲ್ ಗಾಂಧಿ, ಕೇಂದ್ರ ಹಾಗೂ ಉತ್ತರ ಪ್ರದೇಶದ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:

ನೀವು ಎಷ್ಟೇ ಅಧ್ಯಯನ ಮಾಡಿ, ಮುಂದಿನ ದಿನಗಳಲ್ಲಿ ದೇಶದ ಯುವ ಜನತೆಗೆ ಉದ್ಯೋಗ ಸಿಗಲು ಸಾಧ್ಯವಿಲ್ಲ ಎಂದು ರಾಹುಲ್ ಆತಂಕ ವ್ಯಕ್ತಪಡಿಸಿದರು.

ಕೋವಿಡ್ ಸಮಯದಲ್ಲಿ ನನ್ನ ಮಾತನ್ನು ಯಾರೂ ಆಲಿಸಿಲ್ಲ. ಆದರೆ ಗಂಗಾ ನದಿಯಲ್ಲಿ ಮೃತದೇಹ ತೇಲಿರುವುದನ್ನು ನೀವೇ ಕಣ್ಣಾರೆ ಕಂಡಿದ್ದೀರಿ ಎಂದು ಹೇಳಿದರು.

ಕಳೆದ 70 ವರ್ಷಗಳಲ್ಲಿ ಏನೂ ಆಗಿಲ್ಲ ಎಂದು ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿರುವ ರಾಹುಲ್, ವಾಸ್ತವವಾಗಿ 70 ವರ್ಷಗಳಲ್ಲಿ ಅಂಬಾನಿ, ಅದಾನಿ ಪರ ಏನೂ ಆಗಿಲ್ಲ ಎಂದು ಲೇವಡಿ ಮಾಡಿದರು.

ಭಾರತಕ್ಕೆ ದೊಡ್ಡ ಕೋಟ್ಯಾಧಿಪತಿಗಳು ಉದ್ಯೋಗವನ್ನು ನೀಡುವುದಿಲ್ಲ ಎಂಬುದನ್ನು ನೆನಪಿಡಿ. ಸಣ್ಣ ವ್ಯಾಪಾರಿಗಳಿಂದ ಇದು ಸಾಧ್ಯ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT