<p><strong>ನವದೆಹಲಿ:</strong> ಕರ್ನಾಟಕ ಮತ್ತು ಉತ್ತರ ಪ್ರದೇಶಗಳಲ್ಲಿ ತಲಾ ಒಂದು ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ.</p>.<p>ಲೋಕಸಭೆಯಲ್ಲಿ ಮಂಗಳವಾರ ಈ ಸಂಬಂಧ ಲಿಖಿತ ಉತ್ತರ ನೀಡಿರುವ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ, ಪ್ಲಾಸ್ಟಿಕ್ ಪಾರ್ಕ್ಗಾಗಿ ಗುಜರಾತ್, ಆಂಧ್ರಪ್ರದೇಶ, ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಗೋವಾ ಸರ್ಕಾರಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿದ್ದವು ಎಂದು ತಿಳಿಸಿದ್ದಾರೆ.</p>.<p>ಸ್ಥಳ, ಯೋಜನೆಯ ಅಂದಾಜು ವೆಚ್ಚ ಮತ್ತಿತರ ಅಂಶಗಳಿರುವ ಪ್ರಾಥಮಿಕ ಪ್ರಸ್ತಾವನೆಗಳನ್ನು ಕರ್ನಾಟಕ, ಉತ್ತರ ಪ್ರದೇಶ, ಬಿಹಾರ ಮತ್ತು ಹಿಮಾಚಲ ಪ್ರದೇಶ ಸರ್ಕಾರಗಳು ನಿಗದಿತ ಅವಧಿಯಲ್ಲಿ ಸಲ್ಲಿಸಿವೆ. ಈ ಪೈಕಿ ಕರ್ನಾಟಕ ಮತ್ತು ಉತ್ತರ ಪ್ರದೇಶ ಸರ್ಕಾರಗಳ ಪ್ರಸ್ತಾವನೆಗೆ ಸಮ್ಮತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ತಜ್ಞರ ಸಮಿತಿಯು ತಾಂತ್ರಿಕ ಪರಿಶೀಲನೆ ನಡೆಸಿ ಸಲ್ಲಿಸಿದ ವರದಿಯನ್ವಯ ಕರ್ನಾಟಕದ ಮಂಗಳೂರು ಬಳಿಯ ಗಂಜಿಮಠ ಹಾಗೂ ಉತ್ತರ ಪ್ರದೇಶದ ಗೋರಖ್ಪುರ ಬಳಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲಾಗುವುದು. ಈ ಪಾರ್ಕ್ನ ಎಲ್ಲ ಘಟಕಗಳು ಶಾಸನಬದ್ಧ ಮಾನದಂಡ ಅನುಸರಿಸಬೇಕಲ್ಲದೆ, ಅಗತ್ಯ ಪರಿಸರ ಅನುಮತಿ ಹೊಂದಿರಬೇಕು ಎಂದು ಅವರು ತಿಳಿಸಿದ್ದಾರೆ.</p>.<p>ಈ ಘಟಕಗಳ ಸ್ಥಾಪನೆಯಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇದ್ದರೆ ಸರ್ಕಾರವು ಅಗತ್ಯ ಸಮೀಕ್ಷೆ ಕೈಗೊಳ್ಳಲಿದೆ ಎಂದೂ ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕ ಮತ್ತು ಉತ್ತರ ಪ್ರದೇಶಗಳಲ್ಲಿ ತಲಾ ಒಂದು ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ.</p>.<p>ಲೋಕಸಭೆಯಲ್ಲಿ ಮಂಗಳವಾರ ಈ ಸಂಬಂಧ ಲಿಖಿತ ಉತ್ತರ ನೀಡಿರುವ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ, ಪ್ಲಾಸ್ಟಿಕ್ ಪಾರ್ಕ್ಗಾಗಿ ಗುಜರಾತ್, ಆಂಧ್ರಪ್ರದೇಶ, ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಗೋವಾ ಸರ್ಕಾರಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿದ್ದವು ಎಂದು ತಿಳಿಸಿದ್ದಾರೆ.</p>.<p>ಸ್ಥಳ, ಯೋಜನೆಯ ಅಂದಾಜು ವೆಚ್ಚ ಮತ್ತಿತರ ಅಂಶಗಳಿರುವ ಪ್ರಾಥಮಿಕ ಪ್ರಸ್ತಾವನೆಗಳನ್ನು ಕರ್ನಾಟಕ, ಉತ್ತರ ಪ್ರದೇಶ, ಬಿಹಾರ ಮತ್ತು ಹಿಮಾಚಲ ಪ್ರದೇಶ ಸರ್ಕಾರಗಳು ನಿಗದಿತ ಅವಧಿಯಲ್ಲಿ ಸಲ್ಲಿಸಿವೆ. ಈ ಪೈಕಿ ಕರ್ನಾಟಕ ಮತ್ತು ಉತ್ತರ ಪ್ರದೇಶ ಸರ್ಕಾರಗಳ ಪ್ರಸ್ತಾವನೆಗೆ ಸಮ್ಮತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ತಜ್ಞರ ಸಮಿತಿಯು ತಾಂತ್ರಿಕ ಪರಿಶೀಲನೆ ನಡೆಸಿ ಸಲ್ಲಿಸಿದ ವರದಿಯನ್ವಯ ಕರ್ನಾಟಕದ ಮಂಗಳೂರು ಬಳಿಯ ಗಂಜಿಮಠ ಹಾಗೂ ಉತ್ತರ ಪ್ರದೇಶದ ಗೋರಖ್ಪುರ ಬಳಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲಾಗುವುದು. ಈ ಪಾರ್ಕ್ನ ಎಲ್ಲ ಘಟಕಗಳು ಶಾಸನಬದ್ಧ ಮಾನದಂಡ ಅನುಸರಿಸಬೇಕಲ್ಲದೆ, ಅಗತ್ಯ ಪರಿಸರ ಅನುಮತಿ ಹೊಂದಿರಬೇಕು ಎಂದು ಅವರು ತಿಳಿಸಿದ್ದಾರೆ.</p>.<p>ಈ ಘಟಕಗಳ ಸ್ಥಾಪನೆಯಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇದ್ದರೆ ಸರ್ಕಾರವು ಅಗತ್ಯ ಸಮೀಕ್ಷೆ ಕೈಗೊಳ್ಳಲಿದೆ ಎಂದೂ ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>