<p><strong>ಮುಂಬೈ: </strong>ಭಾರತದ ಪಶ್ಚಿಮ ಕರಾವಳಿ ಭಾಗದಲ್ಲಿ ತೀವ್ರ ಹಾನಿ ಮಾಡುತ್ತಿರುವ ತೌತೆ ಚಂಡಮಾರುತದಿಂದ ಮಹಾರಾಷ್ಟ್ರದಲ್ಲಿ ಈವರೆಗೂ 11 ಮಂದಿ ಸಾವಿಗೀಡಾಗಿದ್ದಾರೆ.</p>.<p>ವಾಣಿಜ್ಯ ನಗರಿ ಮುಂಬೈ, ಫಾಲ್ಘರ್, ಠಾಣೆ, ರತ್ನಗಿರಿ ಹಾಗೂ ಸಿಂಧುದುರ್ಗ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಹಲವು ಭಾಗಗಳಲ್ಲಿ ಬೆಳೆಗಳಿಗೆ ತೀವ್ರ ಹಾನಿಯಾಗಿದೆ.</p>.<p>ಅರಬ್ಬಿ ಸಮುದ್ರದ ಅಲೆಗಳ ರಭಸದಿಂದಾಗಿ ಹಲವು ಹಡಗುಗಳಿಗೆ ಹಾನಿಯಾಗಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿವೆ, ತಂತಿಗಳು ತುಂಡರಿಸಿ ಬಿದ್ದಿವೆ. ಇದರಿಂದಾಗಿ ವಿದ್ಯುತ್ ಸಂಪರ್ಕ ಹಾಗೂ ನೀರಿನ ಪೂರೈಕೆ, ಇಂಟರ್ನೆಟ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.</p>.<p>ವರದಿಗಳ ಪ್ರಕಾರ, 46 ಲಕ್ಷಕ್ಕೂ ಹೆಚ್ಚು ಜನರು ವಿದ್ಯುತ್ ಸಂಪರ್ಕ ವ್ಯತ್ಯಯ ಅನುಭವಿಸಿದ್ದಾರೆ.</p>.<p><strong>ಇದನ್ನೂ ಓದಿ– </strong><a href="https://www.prajavani.net/india-news/cyclone-navy-rescues-177-from-barge-rescuees-land-in-mumbai-831444.html" target="_blank">ತೌತೆ ಚಂಡಮಾರುತ | ಅರಬ್ಬಿ ಸಮುದ್ರದಲ್ಲಿ ಸಿಲುಕಿದ ದೋಣಿ: 177 ಮಂದಿ ರಕ್ಷಣೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಭಾರತದ ಪಶ್ಚಿಮ ಕರಾವಳಿ ಭಾಗದಲ್ಲಿ ತೀವ್ರ ಹಾನಿ ಮಾಡುತ್ತಿರುವ ತೌತೆ ಚಂಡಮಾರುತದಿಂದ ಮಹಾರಾಷ್ಟ್ರದಲ್ಲಿ ಈವರೆಗೂ 11 ಮಂದಿ ಸಾವಿಗೀಡಾಗಿದ್ದಾರೆ.</p>.<p>ವಾಣಿಜ್ಯ ನಗರಿ ಮುಂಬೈ, ಫಾಲ್ಘರ್, ಠಾಣೆ, ರತ್ನಗಿರಿ ಹಾಗೂ ಸಿಂಧುದುರ್ಗ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಹಲವು ಭಾಗಗಳಲ್ಲಿ ಬೆಳೆಗಳಿಗೆ ತೀವ್ರ ಹಾನಿಯಾಗಿದೆ.</p>.<p>ಅರಬ್ಬಿ ಸಮುದ್ರದ ಅಲೆಗಳ ರಭಸದಿಂದಾಗಿ ಹಲವು ಹಡಗುಗಳಿಗೆ ಹಾನಿಯಾಗಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿವೆ, ತಂತಿಗಳು ತುಂಡರಿಸಿ ಬಿದ್ದಿವೆ. ಇದರಿಂದಾಗಿ ವಿದ್ಯುತ್ ಸಂಪರ್ಕ ಹಾಗೂ ನೀರಿನ ಪೂರೈಕೆ, ಇಂಟರ್ನೆಟ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.</p>.<p>ವರದಿಗಳ ಪ್ರಕಾರ, 46 ಲಕ್ಷಕ್ಕೂ ಹೆಚ್ಚು ಜನರು ವಿದ್ಯುತ್ ಸಂಪರ್ಕ ವ್ಯತ್ಯಯ ಅನುಭವಿಸಿದ್ದಾರೆ.</p>.<p><strong>ಇದನ್ನೂ ಓದಿ– </strong><a href="https://www.prajavani.net/india-news/cyclone-navy-rescues-177-from-barge-rescuees-land-in-mumbai-831444.html" target="_blank">ತೌತೆ ಚಂಡಮಾರುತ | ಅರಬ್ಬಿ ಸಮುದ್ರದಲ್ಲಿ ಸಿಲುಕಿದ ದೋಣಿ: 177 ಮಂದಿ ರಕ್ಷಣೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>