ಈ ಕುರಿತು ಕೇಂದ್ರ ರೈಲ್ವೆ ಸಚಿವ ಪೀಯುಷ್ ಗೋಯಲ್ ಅವರು ಆಕ್ಸಿಜನ್ ಎಕ್ಸ್ಪ್ರೆಸ್ ಸಂಚರಿಸುತ್ತಿರುವ ವಿಡಿಯೊವನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
‘ರೈಲ್ವೆ ಇಲಾಖೆ ದೇಶದ ನಾಗರಿಕರ ಯೋಗಕ್ಷೇಮವನ್ನು ಕಾಪಾಡುವ ನಿಟ್ಟಿನಲ್ಲಿ ಕಷ್ಟದ ಸಂದರ್ಭದಲ್ಲಿ ಎಲ್ಲಾ ಅಗತ್ಯ ಸರಕುಗಳನ್ನು ಸಾಗಿಸುವ ಮೂಲಕ ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿದೆ’ ಎಂದು ಗೋಯಲ್ ಹೇಳಿದ್ದಾರೆ.
ಆಕ್ಸಿಜನ್ ಟ್ಯಾಂಕರ್ಗಳನ್ನು ಸಾಗಿಸುವ ಸೌಕರ್ಯಗಳ ವೆಚ್ಚವನ್ನು ಭಾರತೀಯ ಸೇನೆ ಭರಿಸಿದ್ದು, ರೈಲ್ವೆ ಇಲಾಖೆ ನಿರ್ವಹಣೆ ಮಾಡುತ್ತಿದೆ. ಮೊದಲ ಆಕ್ಸಿಜನ್ ಎಕ್ಸ್ಪ್ರೆಸ್ ಸೋಮವಾರ ರಾತ್ರಿ 8.05ಕ್ಕೆ ಕಲಂಬೋಲಿಯಿಂದ ಹೊರಟಿತ್ತು. ಕಲಂಬೋಲಿ ಯಾರ್ಡ್ ಮುಂಬೈ ಮಹಾನಗರಿಯಿಂದ 40 ಕಿ.ಮೀ. ದೂರದಲ್ಲಿದೆ.