ಶಿಮ್ಲಾ: ದಿನದಿಂದ ದಿನಕ್ಕೆ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ಕಣ ರಂಗೇರುತ್ತಿದ್ದು, ಆಡಳಿತಾರೂಢ ಬಿಜೆಪಿಗೆ ಬಂಡಾಯ ಅಭ್ಯರ್ಥಿಗಳದ್ದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಬಿಜೆಪಿಯ ಮಾಜಿ ಸಂಸದ ಕೃಪಾಲ್ ಪಾರ್ಮರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಪ್ರಧಾನಿ ಮೋದಿ ಅವರ ಮನವೊಲಿಕೆಯ ನಂತರವೂ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.