ನವದೆಹಲಿ: ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಚಿತ್ರ ಭಾರತೀಯ ಚಿತ್ರರಂಗದಲ್ಲಿ ಹೊಸ ಮೆಲ್ಲಿಗಲ್ಲು ಸಾಧಿಸಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನಿರ್ದೇಶಕಅಗ್ನಿಹೋತ್ರಿ ನಮ್ಮ ಆಧುನಿಕ ಇತಿಹಾಸದ ಕರಾಳ ಅಧ್ಯಾಯದಸೂಕ್ಷ್ಮ ಚಿತ್ರಣಗಳನ್ನು ಒಳಗೊಂಡ ಕಥೆಯನ್ನು ತೆರೆಯ ಮೇಲೆ ತರುವ ಮೂಲಕಕಾಶ್ಮೀರಿ ಪಂಡಿತರ ದುಸ್ಥಿತಿಗೆ ಸಂಪೂರ್ಣ ನ್ಯಾಯವನ್ನು ಒದಗಿಸುವ ಕೆಲಸ ಮಾಡಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.
ಈ ಸಿನಿಮಾ 1990ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಕಾಶ್ಮೀರಿ ಪಂಡಿತರ ಒತ್ತಾಯದ ವಲಸೆ ಹಾಗೂ ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಅನ್ಯಾಯವನ್ನು ಬಿಂಬಿಸುವ ಕಥಾ ಹಂದರವನ್ನು ಒಳಗೊಂಡಿದೆ.