<p><strong>ಚೆನ್ನೈ:</strong> ಕೋವಿಡ್–19 ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಮದ್ರಾಸ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.<br /><br />‘14 ತಿಂಗಳ ಕಾಲ ಸರ್ಕಾರ ಏನು ಮಾಡುತ್ತಿತ್ತು’ ಎಂದು ನ್ಯಾಯಾಲಯ ಕಟುವಾಗಿ ಪ್ರಶ್ನಿಸಿದೆ.<br /><br />‘ತಜ್ಞರ ಸಲಹೆಗಳ ಆಧಾರದ ಮೇಲೆ ಕಾರ್ಯನಿರ್ವಹಿಸಬೇಕೇ ಹೊರತು ತಾತ್ಕಾಲಿಕ ಉದ್ದೇಶಕ್ಕಾಗಿ ಅಲ್ಲ. ನಮಗೆ ಒಂದು ವರ್ಷ ಸಮಯಾವಕಾಶವಿತ್ತು. ಆದರೆ, ಈಗ ಏಪ್ರಿಲ್ ತಿಂಗಳಲ್ಲಿ ದಿಢೀರನೆ ಎಚ್ಚೆತ್ತುಕೊಂಡಿದ್ದೀರಿ’ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಹೇಳಿದ್ದಾರೆ.<br /><br />ವೈರಸ್ನ ಎರಡನೇ ಅಲೆ ಬರುವುದು ಅನಿರೀಕ್ಷಿತವಾಗಿತ್ತು ಎಂದು ಹೆಚ್ಚುವರಿ ಸಾಲಿಸಿಟರಲ್ ಜನರಲ್ ಆರ್. ಶಂಕರನಾರಾಯಣ ಅವರು ಹೇಳಿಕೆಗೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.<br /><br />ಲಸಿಕೆಗಳಿಗೆ ಯಾವ ಮಾನದಂಡಗಳ ಆಧಾರದ ಮೇಲೆ ದರ ನಿಗದಿಪಡಿಸಲಾಗಿದೆ ಮತ್ತು ಕೋವಿನ್ ಪೋರ್ಟಲ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಬಗ್ಗೆಯೂ ಮುಖ್ಯ ನ್ಯಾಯಮೂರ್ತಿ ಪ್ರಶ್ನಿಸಿದರು. ಈ ಬಗ್ಗೆ ಶುಕ್ರವಾರ ಉತ್ತರ ನೀಡುವುದಾಗಿ ಹೆಚ್ಚುವರಿ ಸಾಲಿಸಿಟರಲ್ ಜನರಲ್ ಉತ್ತರಿಸಿದರು.<br /><br />ಮುಖ್ಯ ನ್ಯಾಯಮೂರ್ತಿ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಸೆಂಥಿಲ್ ಕುಮಾರ್ ರಾಮಮೂರ್ತಿ ಅವರನ್ನೊಳಗೊಂಡ ಪೀಠವು ರೆಮ್ಡಿಸಿವಿರ್ ಲಸಿಕೆ ಕೊರತೆಯ ಬಗ್ಗೆ ನಡೆಸಿದ ವಿಚಾರಣೆ ಸಂದರ್ಭದಲ್ಲಿ ಈ ವಿಷಯಗಳನ್ನು ಪ್ರಸ್ತಾಪಿಸಿತು. ದಿನಪತ್ರಿಕೆಗಳ ವರದಿಗಳ ಆಧಾರದ ಮೇಲೆ ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಸ್ವಯಂಪ್ರೇರಣೆಯಿಂದ ಕೈಗೆತ್ತಿಕೊಂಡಿದೆ.</p>.<p><strong>ಲಾಕ್ಡೌನ್ ಅಗತ್ಯವಿಲ್ಲ: </strong>ಮೇ 1 ಮತ್ತು 2ರಂದು ರಜೆ ಇರುವುದರಿಂದ ಆ ದಿನಗಳಂದು ಲಾಕ್ಡೌನ್ ಜಾರಿಗೊಳಿಸುವ ಅಗತ್ಯ ಇಲ್ಲ ಎಂದು ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳೂ ಹೈಕೋರ್ಟ್ಗೆ ವಿವರಣೆ ನೀಡಿವೆ. ಲಾಕ್ಡೌನ್ ಜಾರಿಗೊಳಿಸುವ ಬಗ್ಗೆ ಪರಿಶೀಲಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಹೀಗಾಗಿ, ಈ ವಿವರಣೆ ನೀಡಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/tamil-nadu-extends-night-curfew-full-lockdown-on-sundays-to-curb-covid-19-826637.html" target="_blank">ಕೋವಿಡ್ ಹೆಚ್ಚಳ: ರಾತ್ರಿ ಕರ್ಫ್ಯೂ ವಿಸ್ತರಿಸಿದ ತಮಿಳುನಾಡು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಕೋವಿಡ್–19 ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಮದ್ರಾಸ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.<br /><br />‘14 ತಿಂಗಳ ಕಾಲ ಸರ್ಕಾರ ಏನು ಮಾಡುತ್ತಿತ್ತು’ ಎಂದು ನ್ಯಾಯಾಲಯ ಕಟುವಾಗಿ ಪ್ರಶ್ನಿಸಿದೆ.<br /><br />‘ತಜ್ಞರ ಸಲಹೆಗಳ ಆಧಾರದ ಮೇಲೆ ಕಾರ್ಯನಿರ್ವಹಿಸಬೇಕೇ ಹೊರತು ತಾತ್ಕಾಲಿಕ ಉದ್ದೇಶಕ್ಕಾಗಿ ಅಲ್ಲ. ನಮಗೆ ಒಂದು ವರ್ಷ ಸಮಯಾವಕಾಶವಿತ್ತು. ಆದರೆ, ಈಗ ಏಪ್ರಿಲ್ ತಿಂಗಳಲ್ಲಿ ದಿಢೀರನೆ ಎಚ್ಚೆತ್ತುಕೊಂಡಿದ್ದೀರಿ’ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಹೇಳಿದ್ದಾರೆ.<br /><br />ವೈರಸ್ನ ಎರಡನೇ ಅಲೆ ಬರುವುದು ಅನಿರೀಕ್ಷಿತವಾಗಿತ್ತು ಎಂದು ಹೆಚ್ಚುವರಿ ಸಾಲಿಸಿಟರಲ್ ಜನರಲ್ ಆರ್. ಶಂಕರನಾರಾಯಣ ಅವರು ಹೇಳಿಕೆಗೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.<br /><br />ಲಸಿಕೆಗಳಿಗೆ ಯಾವ ಮಾನದಂಡಗಳ ಆಧಾರದ ಮೇಲೆ ದರ ನಿಗದಿಪಡಿಸಲಾಗಿದೆ ಮತ್ತು ಕೋವಿನ್ ಪೋರ್ಟಲ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಬಗ್ಗೆಯೂ ಮುಖ್ಯ ನ್ಯಾಯಮೂರ್ತಿ ಪ್ರಶ್ನಿಸಿದರು. ಈ ಬಗ್ಗೆ ಶುಕ್ರವಾರ ಉತ್ತರ ನೀಡುವುದಾಗಿ ಹೆಚ್ಚುವರಿ ಸಾಲಿಸಿಟರಲ್ ಜನರಲ್ ಉತ್ತರಿಸಿದರು.<br /><br />ಮುಖ್ಯ ನ್ಯಾಯಮೂರ್ತಿ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಸೆಂಥಿಲ್ ಕುಮಾರ್ ರಾಮಮೂರ್ತಿ ಅವರನ್ನೊಳಗೊಂಡ ಪೀಠವು ರೆಮ್ಡಿಸಿವಿರ್ ಲಸಿಕೆ ಕೊರತೆಯ ಬಗ್ಗೆ ನಡೆಸಿದ ವಿಚಾರಣೆ ಸಂದರ್ಭದಲ್ಲಿ ಈ ವಿಷಯಗಳನ್ನು ಪ್ರಸ್ತಾಪಿಸಿತು. ದಿನಪತ್ರಿಕೆಗಳ ವರದಿಗಳ ಆಧಾರದ ಮೇಲೆ ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಸ್ವಯಂಪ್ರೇರಣೆಯಿಂದ ಕೈಗೆತ್ತಿಕೊಂಡಿದೆ.</p>.<p><strong>ಲಾಕ್ಡೌನ್ ಅಗತ್ಯವಿಲ್ಲ: </strong>ಮೇ 1 ಮತ್ತು 2ರಂದು ರಜೆ ಇರುವುದರಿಂದ ಆ ದಿನಗಳಂದು ಲಾಕ್ಡೌನ್ ಜಾರಿಗೊಳಿಸುವ ಅಗತ್ಯ ಇಲ್ಲ ಎಂದು ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳೂ ಹೈಕೋರ್ಟ್ಗೆ ವಿವರಣೆ ನೀಡಿವೆ. ಲಾಕ್ಡೌನ್ ಜಾರಿಗೊಳಿಸುವ ಬಗ್ಗೆ ಪರಿಶೀಲಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಹೀಗಾಗಿ, ಈ ವಿವರಣೆ ನೀಡಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/tamil-nadu-extends-night-curfew-full-lockdown-on-sundays-to-curb-covid-19-826637.html" target="_blank">ಕೋವಿಡ್ ಹೆಚ್ಚಳ: ರಾತ್ರಿ ಕರ್ಫ್ಯೂ ವಿಸ್ತರಿಸಿದ ತಮಿಳುನಾಡು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>