ಮುಂಬೈ: ಬೃಹನ್ಮುಂಬಯಿ ಮಹಾನಗರ ಪಾಲಿಕೆ (ಬಿಎಂಸಿ) ಬಾಲಿವುಡ್ ನಟಿ ಕಂಗನಾ ರನೋಟ್ ಅವರ ಬಂಗಲೆ ಕೆಡಲು ನೋಟಿಸ್ ನೀಡಿರುವುದು ಕಾನೂನು ಬಾಹಿರವಾಗಿದೆ ಎಂದು ಕಂಗನಾ ಪರ ವಕೀಲರಾದ ರಿಜ್ವಾನ್ ಸಿದ್ದಿಕಿ ತಿಳಿಸಿದ್ದಾರೆ.
ಕಂಗನಾ ರನೋಟ್ ಅವರ ಬಂಗಲೆ ಕೆಡವದಂತೆ ಬಾಂಬೆ ಹೈಕೋರ್ಟ್ ಬೃಹನ್ಮುಂಬಯಿ ಮಹಾನಗರ ಪಾಲಿಕೆಗೆ (ಬಿಎಂಸಿ) ಬುಧವಾರ ಸೂಚನೆ ನೀಡಿದ ಬಳಿಕ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಬಿಎಂಸಿ ಅಧಿಕಾರಿಗಳು ನೋಟಿಸ್ ನೀಡಿರುವುದು ಕಾನೂನುಗೆ ವಿರುದ್ಧವಾಗಿದೆ. ಅಲ್ಲದೇ ಅಧಿಕಾರಿಗಳು ಕಾರ್ಮಿಕರೊಂದಿಗೆ ಬಂಗಲೆಗೆ ಅಕ್ರಮ ಪ್ರವೇಶ ಮಾಡಿರುವುದು ತಪ್ಪು ಎಂದು ಹೇಳಿದರು. ಕಂಗನಾ ಅವರ ಬಂಗಲೆಯಲ್ಲಿ ಕಾನೂನಿಗೆ ವಿರುದ್ಧವಾಗಿ ಯಾವುದೇ ಕಾಮಗಾರಿಗಳನ್ನು ಮಾಡಿಲ್ಲ ರಿಜ್ವಾನ್ ತಿಳಿಸಿದರು.
The notice given is illegal and they entered the premises illegally. There was no work underway at the premises: Kangana Ranaut's lawyer Rizwan Siddiqui #Mumbaipic.twitter.com/xUwaHL41ec
ಬಿಎಂಸಿ ಮಂಗಳವಾರ ಕಂಗನಾ ಅವರ ಬಂಗಲೆಗೆ ನೋಟಿಸ್ ಅಂಟಿಸಿ, ಸೂಕ್ತ ಅನುಮತಿ ಪಡೆಯದೇ ಕಟ್ಟಡದ ಆವರಣದಲ್ಲಿ ಅನೇಕ ಮಾರ್ಪಾಡುಗಳನ್ನು ಮಾಡಿದ್ದಾರೆ ಎಂದು ಹೇಳಿತ್ತು. ಬುಧವಾರ ಕಟ್ಟಡ ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಿತ್ತು.
ಈ ಹಿನ್ನೆಲೆಯಲ್ಲಿ ಬಿಎಂಸಿಯ ನೋಟಿಸ್ ಪ್ರಶ್ನಿಸಿ ಕಂಗನಾ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್ ತೆರವು ಕಾರ್ಯಾಚರಣೆ ನಿಲ್ಲಿಸುವಂತೆ ತಡೆಯಾಜ್ಞೆ ನೀಡಿದೆ.