ಏಪ್ರಿಲ್ ಮೊದಲ ವಾರದಿಂದಲೇ ನಗರದ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದ, ಆಮ್ಲಜನಕವೂ ದೊರೆಯದ ಸ್ಥಿತಿ ನಿರ್ಮಾಣವಾಗಿತ್ತಲ್ಲದೆ, ಸ್ಮಶಾನಗಳಲ್ಲಿ ಅಂತ್ಯಕ್ರಿಯೆಗೂ ಪರದಾಡುವಂತಿದ್ದ ಸ್ಥಿತಿ ಸೃಷ್ಟಿಯಾಗಿತ್ತು. ಆದರೆ, ಕಳೆದ ಒಂದು ವಾರದಿಂದ ಆ ಸ್ಥಿತಿ ದೂರವಾಗಿದ್ದು ಜನತೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಗುರುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದ 58,744 ಜನರ ಪೈಕಿ, 3,231 ಜನರಲ್ಲಿ (ಶೇ 5.50) ಮಾತ್ರ ಸೋಂಕು ದೃಢಪಟ್ಟಿದೆ. 7,831 ಜನ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 40,214ಕ್ಕೆ ಇಳಿದಿದೆ.