<p><strong>ಮುಂಬೈ:</strong> ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಶ್ಲಾಘಿಸಿರುವ ಶಿವಸೇನಾ, ಕೇಂದ್ರದಲ್ಲಿ ಅಧಿಕಾರದಲ್ಲಿರುವವರಿಗೆ ರಾಹುಲ್ ಕಾಂಗ್ರೆಸ್ ಅಧ್ಯಕ್ಷಗಾದಿಗೆ ಹಿಂತಿರುಗುವ ಭಯ ಕಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಗಾಂಧಿ ಕುಟುಂಬವನ್ನು ಅವಮಾನಿಸುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಎಂದು ಆರೋಪಿಸಿದೆ.</p>.<p>ಶಿವಸೇನಾ ತನ್ನ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಈ ಬಗ್ಗೆ ಉಲ್ಲೇಖ ಮಾಡಿದೆ. ರಾಹುಲ್ ಗಾಂಧಿ ಮಗದೊಮ್ಮೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷಗಾದಿಗೆ ಹಿಂತಿರುಗುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ. ಬಿಜೆಪಿಗೆ ಪ್ರಧಾನಿ ನರೇಂದ್ರ ಮೋದಿಯಂತೆ ಕಾಂಗ್ರೆಸ್ಗೆ ರಾಹುಲ್ ಗಾಂಧಿಯಿಲ್ಲದೆ ಪರ್ಯಾಯ ಮಾರ್ಗವಿಲ್ಲ ಎಂದು ಹೇಳಿದೆ.</p>.<p>ಈ ಸತ್ಯವನ್ನು ಒಪ್ಪಿಕೊಳ್ಳಲೇಬೇಕು. ಸ್ವಲ್ಪ ಸಮಯದ ವರೆಗೆ ರಾಹುಲ್ ಗಾಂಧಿ ಹೋದ ನಂತರ, ಪಕ್ಷದ ಹಿಡಿತವು ದುರ್ಬಲಗೊಂಡಿದೆ. ಈಗ ರಾಹುಲ್ ಗಾಂಧಿ ಮತ್ತೆ ಅಧಿಕಾರಕ್ಕೆ ಮರಳುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ವಹಿಸಲು ರಾಹುಲ್ ಗಾಂಧಿ ತಯಾರಾಗಿದ್ದಾರೆ ಎಂದು ಉಲ್ಲೇಖಿಸಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/sonia-gandhi-slams-govt-over-fuel-price-hike-farmer-stir-says-country-standing-at-crossroads-bjp-794283.html" itemprop="url">ಬಡವರ, ರೈತರ ಬೆನ್ನು ಮುರಿಯುತ್ತಿರುವ ಕೇಂದ್ರ ಸರ್ಕಾರ: ಸೋನಿಯಾ ವಾಗ್ದಾಳಿ </a></p>.<p>ರಾಹುಲ್ ಗಾಂಧಿ ಅವರನ್ನು ದುರ್ಬಲ ನಾಯಕ ಎಂದು ಬಿಂಬಿಸುವ ಪ್ರಯತ್ನಗಳು ನಡೆಸಲಾಗುತ್ತಿದೆ ಎಂದು ಸಂಪಾದಕೀಯದಲ್ಲಿ ಆರೋಪಿಸಲಾಗಿದೆ.</p>.<p>ದೆಹಲಿಯಲ್ಲಿ ಅಧಿಕಾರದಲ್ಲಿರುವವರಿಗೆ ರಾಹುಲ್ ಗಾಂಧಿ ಬಗ್ಗೆ ಭಯ ಕಾಡುತ್ತಿದೆ. ಹಾಗಿಲ್ಲವಾದರೆ ಗಾಂಧಿ ಕುಟುಂಬವನ್ನು ದೂಷಿಸುವ ಅನಗತ್ಯ ಅಭಿಯಾನವನ್ನು ಪ್ರಾರಂಭಿಸುತ್ತಿರಲಿಲ್ಲ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಶ್ಲಾಘಿಸಿರುವ ಶಿವಸೇನಾ, ಕೇಂದ್ರದಲ್ಲಿ ಅಧಿಕಾರದಲ್ಲಿರುವವರಿಗೆ ರಾಹುಲ್ ಕಾಂಗ್ರೆಸ್ ಅಧ್ಯಕ್ಷಗಾದಿಗೆ ಹಿಂತಿರುಗುವ ಭಯ ಕಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಗಾಂಧಿ ಕುಟುಂಬವನ್ನು ಅವಮಾನಿಸುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಎಂದು ಆರೋಪಿಸಿದೆ.</p>.<p>ಶಿವಸೇನಾ ತನ್ನ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಈ ಬಗ್ಗೆ ಉಲ್ಲೇಖ ಮಾಡಿದೆ. ರಾಹುಲ್ ಗಾಂಧಿ ಮಗದೊಮ್ಮೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷಗಾದಿಗೆ ಹಿಂತಿರುಗುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ. ಬಿಜೆಪಿಗೆ ಪ್ರಧಾನಿ ನರೇಂದ್ರ ಮೋದಿಯಂತೆ ಕಾಂಗ್ರೆಸ್ಗೆ ರಾಹುಲ್ ಗಾಂಧಿಯಿಲ್ಲದೆ ಪರ್ಯಾಯ ಮಾರ್ಗವಿಲ್ಲ ಎಂದು ಹೇಳಿದೆ.</p>.<p>ಈ ಸತ್ಯವನ್ನು ಒಪ್ಪಿಕೊಳ್ಳಲೇಬೇಕು. ಸ್ವಲ್ಪ ಸಮಯದ ವರೆಗೆ ರಾಹುಲ್ ಗಾಂಧಿ ಹೋದ ನಂತರ, ಪಕ್ಷದ ಹಿಡಿತವು ದುರ್ಬಲಗೊಂಡಿದೆ. ಈಗ ರಾಹುಲ್ ಗಾಂಧಿ ಮತ್ತೆ ಅಧಿಕಾರಕ್ಕೆ ಮರಳುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ವಹಿಸಲು ರಾಹುಲ್ ಗಾಂಧಿ ತಯಾರಾಗಿದ್ದಾರೆ ಎಂದು ಉಲ್ಲೇಖಿಸಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/sonia-gandhi-slams-govt-over-fuel-price-hike-farmer-stir-says-country-standing-at-crossroads-bjp-794283.html" itemprop="url">ಬಡವರ, ರೈತರ ಬೆನ್ನು ಮುರಿಯುತ್ತಿರುವ ಕೇಂದ್ರ ಸರ್ಕಾರ: ಸೋನಿಯಾ ವಾಗ್ದಾಳಿ </a></p>.<p>ರಾಹುಲ್ ಗಾಂಧಿ ಅವರನ್ನು ದುರ್ಬಲ ನಾಯಕ ಎಂದು ಬಿಂಬಿಸುವ ಪ್ರಯತ್ನಗಳು ನಡೆಸಲಾಗುತ್ತಿದೆ ಎಂದು ಸಂಪಾದಕೀಯದಲ್ಲಿ ಆರೋಪಿಸಲಾಗಿದೆ.</p>.<p>ದೆಹಲಿಯಲ್ಲಿ ಅಧಿಕಾರದಲ್ಲಿರುವವರಿಗೆ ರಾಹುಲ್ ಗಾಂಧಿ ಬಗ್ಗೆ ಭಯ ಕಾಡುತ್ತಿದೆ. ಹಾಗಿಲ್ಲವಾದರೆ ಗಾಂಧಿ ಕುಟುಂಬವನ್ನು ದೂಷಿಸುವ ಅನಗತ್ಯ ಅಭಿಯಾನವನ್ನು ಪ್ರಾರಂಭಿಸುತ್ತಿರಲಿಲ್ಲ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>