<p class="title"><strong>ನವದೆಹಲಿ: ದೆ</strong>ಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಲ್ಲಿನ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರನ್ನು ಶುಕ್ರವಾರ ಭೇಟಿಯಾಗಿದ್ದು, ‘ಈ ಭೇಟಿಯು ದೆಹಲಿಯ ಅಭಿವೃದ್ಧಿಗೆ ಹಾಗೂ ಇಬ್ಬರು ಒಟ್ಟುಗೂಡಿ ಕೆಲಸ ಮಾಡಲು ಮುಖ್ಯವಾದುದಾಗಿದೆ’ ಎಂದು ಹೇಳಿದರು.</p>.<p class="title">ಸಕ್ಸೇನಾ ಅವರೊಂದಿಗೆ ನಡೆದ ವಾರದ ಸಭೆಯ ಬಳಿಕ, ‘ಸಭೆಯು ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು. ನಮ್ಮಿಬ್ಬರ ಮಧ್ಯೆ ಹಲವಾರು ವಿಷಯಗಳ ಕುರಿತು ಅಭಿಪ್ರಾಯ ಭೇದಗಳಿರಬಹುದು. ಆದರೆ ಇಬ್ಬರ ನಡುವೆ ಯಾವುದೇ ವೈಮನಸ್ಸು ಇಲ್ಲ’ ಎಂದು ಕೇಜ್ರಿವಾಲ್ ಹೇಳಿದರು.</p>.<p class="title">ಆಗಸ್ಟ್ 1ರಂದು ಸಿಂಗಪುರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಅನುಮತಿ ನೀಡಬೇಕು ಎಂಬ ಎಎಪಿ ಸರ್ಕಾರದ ಪ್ರಸ್ತಾವವನ್ನು ಕಳೆದ ವಾರ ಸಕ್ಸೇನಾ ತಿರಸ್ಕರಿಸಿದ್ದರು. ‘ಮೇಯರ್ಗಳ ಸಮ್ಮೇಳನದಲ್ಲಿ ಕೇಜ್ರಿವಾಲ್ ವರ ಹಾಜರಾತಿಯು ‘ಕೆಟ್ಟ ಪೂರ್ವನಿದರ್ಶನ’ವನ್ನು ನೀಡುತ್ತದೆ’ ಎಂದು ಸಕ್ಸೇನಾ ಹೇಳಿದ್ದರು.</p>.<p class="title">ಪ್ರಸ್ತಾವ ತಿರಸ್ಕರಿಸದ ನಂತರ, ಕಳೆದ ಶುಕ್ರವಾರ ವಾರದ ಸಭೆಗೆ ಕೇಜ್ರಿವಾಲ್ ಹಾಜರಾಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: ದೆ</strong>ಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಲ್ಲಿನ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರನ್ನು ಶುಕ್ರವಾರ ಭೇಟಿಯಾಗಿದ್ದು, ‘ಈ ಭೇಟಿಯು ದೆಹಲಿಯ ಅಭಿವೃದ್ಧಿಗೆ ಹಾಗೂ ಇಬ್ಬರು ಒಟ್ಟುಗೂಡಿ ಕೆಲಸ ಮಾಡಲು ಮುಖ್ಯವಾದುದಾಗಿದೆ’ ಎಂದು ಹೇಳಿದರು.</p>.<p class="title">ಸಕ್ಸೇನಾ ಅವರೊಂದಿಗೆ ನಡೆದ ವಾರದ ಸಭೆಯ ಬಳಿಕ, ‘ಸಭೆಯು ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು. ನಮ್ಮಿಬ್ಬರ ಮಧ್ಯೆ ಹಲವಾರು ವಿಷಯಗಳ ಕುರಿತು ಅಭಿಪ್ರಾಯ ಭೇದಗಳಿರಬಹುದು. ಆದರೆ ಇಬ್ಬರ ನಡುವೆ ಯಾವುದೇ ವೈಮನಸ್ಸು ಇಲ್ಲ’ ಎಂದು ಕೇಜ್ರಿವಾಲ್ ಹೇಳಿದರು.</p>.<p class="title">ಆಗಸ್ಟ್ 1ರಂದು ಸಿಂಗಪುರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಅನುಮತಿ ನೀಡಬೇಕು ಎಂಬ ಎಎಪಿ ಸರ್ಕಾರದ ಪ್ರಸ್ತಾವವನ್ನು ಕಳೆದ ವಾರ ಸಕ್ಸೇನಾ ತಿರಸ್ಕರಿಸಿದ್ದರು. ‘ಮೇಯರ್ಗಳ ಸಮ್ಮೇಳನದಲ್ಲಿ ಕೇಜ್ರಿವಾಲ್ ವರ ಹಾಜರಾತಿಯು ‘ಕೆಟ್ಟ ಪೂರ್ವನಿದರ್ಶನ’ವನ್ನು ನೀಡುತ್ತದೆ’ ಎಂದು ಸಕ್ಸೇನಾ ಹೇಳಿದ್ದರು.</p>.<p class="title">ಪ್ರಸ್ತಾವ ತಿರಸ್ಕರಿಸದ ನಂತರ, ಕಳೆದ ಶುಕ್ರವಾರ ವಾರದ ಸಭೆಗೆ ಕೇಜ್ರಿವಾಲ್ ಹಾಜರಾಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>