‘ಸಂಸದೀಯ ಪ್ರಜಾಪ್ರಭುತ್ವದಲ್ಲಿ ರಸ್ತೆಯಲ್ಲೂ, ಸಂಸತ್ತಿನಲ್ಲೂ ಪ್ರತಿಭಟನೆ ನಡೆಯಬಹುದು. ರಸ್ತೆಗಳಲ್ಲಿ ನಡೆಯುವ ಪ್ರತಿಭಟನೆಯು ಶಾಂತಿಯುತವಾಗಿರಬೇಕು. ಸಿಎಎ ವಿರೋಧಿ ಪ್ರತಿಭಟನೆಯು ಕೆಲವು ಅನಿರೀಕ್ಷಿತ ಸನ್ನಿವೇಶಗಳು ಸೃಷ್ಟಿಯಾಗಿ ಕೊನೆಗೊಂಡಿತು. ಅದು ಯಾರ ಕೈಯಲ್ಲೂ ಇರಲಿಲ್ಲ. ದೇವರೇ ಮಧ್ಯಪ್ರವೇಶಿಸಿದ್ದಾರೆ’ ಎಂದು ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್, ಅನಿರುದ್ಧ ಬೋಸ್ ಹಾಗೂ ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠ ಹೇಳಿದೆ.