ಹಿಂಡನ್ಬರ್ಗ್ ರಿಸರ್ಚ್ನ ವರದಿಯ ನಂತರ ಅದಾನಿ ಸಮೂಹದ ಷೇರುಗಳ ಮೌಲ್ಯದಲ್ಲಿ ಸುಮಾರು ₹10 ಲಕ್ಷ ಕೋಟಿಯಷ್ಟು ನಷ್ಟವಾಗಿದೆ. ಇದರಿಂದ ದೇಶದ ಹೂಡಿಕೆದಾರರಿಗೆ ನಷ್ಟವಾಗಿದೆ. ಇಂತಹ ನಷ್ಟವನ್ನು ತಪ್ಪಿಸಲು ಅಗತ್ಯ ವ್ಯವಸ್ಥೆ ಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕಳೆದ ವಾರ ವಿಚಾರಣೆಗೆ ಎತ್ತಿಕೊಂಡಿತ್ತು. ಆಗ, ‘ಹೂಡಿಕೆದಾರರ ಹಿತಾಸಕ್ತಿ ರಕ್ಷಣೆಗೆ ಕಠಿಣವಾದ ನಿಯಂತ್ರಣ ವ್ಯವಸ್ಥೆ ಬೇಕು. ಈಗ ಇರುವ ನಿಯಂತ್ರಣ ವ್ಯವಸ್ಥೆಯ ಮೌಲ್ಯಮಾಪನವೂ ಆಗಬೇಕು. ಈಗಿನ ಸ್ಥಿತಿಯ ಪರಿಶೀಲನೆಗೆ ಸಮಿತಿ ರಚನೆಯಾಗಬೇಕು’ ಎಂದು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್,
ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೆ.ಬಿ.ಪಾರ್ದೀವಾಲಾ ಅವರಿದ್ದ ಪೀಠವು ಹೇಳಿತ್ತು. ಈ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.