‘ಯಾವುದೇ ರೀತಿಯ ಅಡೆತಡೆ ಇಲ್ಲದೆಯೇ ಮಾಹಿತಿಯ ಪ್ರಸಾರಕ್ಕೆ ಅವಕಾಶ ಇರಬೇಕು. ಜನರ ಅಹವಾಲುಗಳನ್ನು ನಾವು ಕೇಳಬೇಕು’ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ‘ಆಮ್ಲಜನಕ, ಹಾಸಿಗೆ ಕೊರತೆ ಬಗ್ಗೆ, ವೈದ್ಯರು ಸಿಗದಿರುವ ಬಗ್ಗೆ ಜನರು ಜಾಲತಾಣಗಳಲ್ಲಿ ಪೋಸ್ಟ್ ಮಾಡಿದಾಗ, ವದಂತಿ ಹಬ್ಬಿಸುತ್ತಿದ್ದಾರೆ ಎಂದು ಪರಿಗಣಿಸಿ ಅಂಥವರ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು’ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತು.