ಸೋಂಕಿತ ವ್ಯಕ್ತಿಗೆ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಅಲ್ಲದೆ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕ ಹೊಂದಿದವರಲ್ಲಿ ಪ್ರತ್ಯೇಕವಾಸದಲ್ಲಿರಲು ಸೂಚಿಸಲಾಗಿದ್ದು, ನಿಗಾ ವಹಿಸಲಾಗುತ್ತಿದೆ.
ಕೊಲ್ಲಂ ಜಿಲ್ಲೆಯಲ್ಲಿ ಮೊದಲ ಮತ್ತು ಕಣ್ಣೂರು ಜಿಲ್ಲೆಯಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿತ್ತು. ಈ ಪೈಕಿ ಕಣ್ಣೂರಿನ ಯುವಕ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಮಾಣಿಸಿದ್ದರು.