‘ಗಣನೀಯ ಸಂಖ್ಯೆಯಲ್ಲಿ ಜನರು ಲಸಿಕೆ ಪಡೆಯುವವರೆಗೂ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಒಂದು ವೇಳೆ ಸೋಂಕು ಗಮನಾರ್ಹವಾಗಿ ಉಲ್ಬಣಗೊಂಡರೆ ಮತ್ತು ಕೋವಿಡ್ ದೃಢ ಪ್ರಮಾಣ ಶೇಕಡ 5ಕ್ಕಿಂತ ಹೆಚ್ಚಾದ್ದಲ್ಲಿ ಅಂತಹ ಪ್ರದೇಶಗಳಲ್ಲಿ ಕಠಿಣ ಕಣ್ಗಾವಲು ವ್ಯವಸ್ಥೆ ಕೈಗೊಳ್ಳಬೇಕು ಮತ್ತು ಸ್ಥಳೀಯವಾಗಿ ಲಾಕ್ಡೌನ್ ಹೇರಬೇಕು. ರಾಷ್ಟ್ರವ್ಯಾಪ್ತಿ ಲಾಕ್ಡೌನ್, ಸೋಂಕು ನಿಯಂತ್ರಣಕ್ಕೆ ಪರಿಹಾರವಲ್ಲ. ನಾವು ದೇಶದ ಆರ್ಥಿಕತೆಯ ಮೇಲೂ ಗಮನಹರಿಸಬೇಕು’ ಎಂದು ಅವರು ಅಭಿಪ್ರಾಯಪಟ್ಟರು.