<p><strong>ಶಬರಿಮಲೆ:</strong> ನವೆಂಬರ್ 16 ರಂದು ಕೇರಳದ ಅಯ್ಯಪ್ಪ ದೇವಸ್ಥಾನವನ್ನು ತೆರೆದಾಗಿನಿಂದ ಯಾತ್ರಾರ್ಥಿಗಳು, ಪೊಲೀಸ್ ಸಿಬ್ಬಂದಿ ಮತ್ತು ದೇವಾಲಯದ ನೌಕರರು ಸೇರಿದಂತೆ ಒಟ್ಟು 39 ಜನರಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. .</p>.<p>ಒಟ್ಟು 39 ಪ್ರಕರಣಗಳು ದೇವಾಲಯ ಸಂಕೀರ್ಣ ಮತ್ತು ಮೂಲ ಶಿಬಿರಗಳಾದ ಪಂಬಾ ಮತ್ತು ನೀಳಕಲ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಇಲ್ಲಿನ ತಿರುವಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮೂಲಗಳ ಪ್ರಕಾರ, ಒಟ್ಟು ಪ್ರಕರಣಗಳಲ್ಲಿ 27 ಮಂದಿ ವಿವಿಧ ಇಲಾಖೆಗಳ ನೌಕರರಾಗಿದ್ದು, ಅವರೆಲ್ಲರನ್ನೂ ತಕ್ಷಣವೇ ಕೋವಿಡ್ ಚಿಕಿತ್ಸಾ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.</p>.<p>ದೇವಾಲಯವು COVID-19 ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದು, ದೇವಾಲಯದ ಆವರಣ ಮತ್ತು ಮೂಲ ಶಿಬಿರಗಳಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಟಿಡಿಬಿಯ ಮೂಲಗಳು ತಿಳಿಸಿವೆ.</p>.<p>ಒಟ್ಟಾರೆ ಸೋಂಕಿತರಲ್ಲಿ ನಾಲ್ವರು ಟಿಡಿಬಿಯ ಸಿಬ್ಬಂದಿ, ಇಬ್ಬರು ತಾತ್ಕಾಲಿಕ ಸಿಬ್ಬಂದಿಯೂ ಇದ್ದಾರೆ ಎಂದು ಗೊತ್ತಾಗಿದೆ.</p>.<p>ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುವ ಶಬರಿಮಲೆಯಲ್ಲಿ ಈ ಬಾರಿ ಕೋವಿಡ್ ಮಾರ್ಗಸೂಚಿಯ ಪ್ರಕಾರ, 10-60 ವಯಸ್ಸಿನವರಿಗೆ ಮಾತ್ರ ದೇಗುಲ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಬರಿಮಲೆ:</strong> ನವೆಂಬರ್ 16 ರಂದು ಕೇರಳದ ಅಯ್ಯಪ್ಪ ದೇವಸ್ಥಾನವನ್ನು ತೆರೆದಾಗಿನಿಂದ ಯಾತ್ರಾರ್ಥಿಗಳು, ಪೊಲೀಸ್ ಸಿಬ್ಬಂದಿ ಮತ್ತು ದೇವಾಲಯದ ನೌಕರರು ಸೇರಿದಂತೆ ಒಟ್ಟು 39 ಜನರಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. .</p>.<p>ಒಟ್ಟು 39 ಪ್ರಕರಣಗಳು ದೇವಾಲಯ ಸಂಕೀರ್ಣ ಮತ್ತು ಮೂಲ ಶಿಬಿರಗಳಾದ ಪಂಬಾ ಮತ್ತು ನೀಳಕಲ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಇಲ್ಲಿನ ತಿರುವಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮೂಲಗಳ ಪ್ರಕಾರ, ಒಟ್ಟು ಪ್ರಕರಣಗಳಲ್ಲಿ 27 ಮಂದಿ ವಿವಿಧ ಇಲಾಖೆಗಳ ನೌಕರರಾಗಿದ್ದು, ಅವರೆಲ್ಲರನ್ನೂ ತಕ್ಷಣವೇ ಕೋವಿಡ್ ಚಿಕಿತ್ಸಾ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.</p>.<p>ದೇವಾಲಯವು COVID-19 ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದು, ದೇವಾಲಯದ ಆವರಣ ಮತ್ತು ಮೂಲ ಶಿಬಿರಗಳಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಟಿಡಿಬಿಯ ಮೂಲಗಳು ತಿಳಿಸಿವೆ.</p>.<p>ಒಟ್ಟಾರೆ ಸೋಂಕಿತರಲ್ಲಿ ನಾಲ್ವರು ಟಿಡಿಬಿಯ ಸಿಬ್ಬಂದಿ, ಇಬ್ಬರು ತಾತ್ಕಾಲಿಕ ಸಿಬ್ಬಂದಿಯೂ ಇದ್ದಾರೆ ಎಂದು ಗೊತ್ತಾಗಿದೆ.</p>.<p>ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುವ ಶಬರಿಮಲೆಯಲ್ಲಿ ಈ ಬಾರಿ ಕೋವಿಡ್ ಮಾರ್ಗಸೂಚಿಯ ಪ್ರಕಾರ, 10-60 ವಯಸ್ಸಿನವರಿಗೆ ಮಾತ್ರ ದೇಗುಲ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>