ಕೆಲವರಿಗೆ ನ್ಯಾಯಾಂಗ ಪ್ರಕ್ರಿಯೆಯ ಮೇಲೆ ನಂಬಿಕೆ ಇಲ್ಲವೆಂದು ಭಾವಿಸುತ್ತೇನೆ. ಅಂಥವರು ರಾಜಕೀಯ ಪ್ರವಾಸೋದ್ಯಮ (ಉತ್ತರ ಪ್ರದೇಶದ ಲಖಿಂಪುರ ಖೇರಿ ಘಟನೆ ಉದ್ದೇಶಿಸಿ) ಮಾಡುತ್ತಿರುವುದು ದುರದೃಷ್ಟಕರ. ರಾಜಸ್ಥಾನ, ಪಂಜಾಬ್ ಮತ್ತು ಛತ್ತೀಸಗಡಗಳಲ್ಲಿ ಅನೇಕ ಅಪರಾಧ ಪ್ರಕರಣಗಳಾಗುತ್ತಿವೆ. ಆದರೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಅಲ್ಲಿಗೆ ಎಂದೂ ಭೇಟಿ ನೀಡಿಲ್ಲ ಎಂದು ಅನುರಾಗ್ ಠಾಕೂರ್ ಹೇಳಿರುವುದಾಗಿ ‘ಎಎನ್ಐ’ ವರದಿ ಮಾಡಿದೆ.