<p><strong>ಕೋಲ್ಕತ್ತ: </strong>ಪಶ್ಚಿಮ ಬಂಗಾಳದ ಬಿಜೆಪಿಯಲ್ಲಿ ಒಳಜಗಳಗಳ ಕುರಿತ ವರದಿಗಳ ಮಧ್ಯೆ ಬಿಜೆಪಿಯಲ್ಲಿ ಉಳಿದುಕೊಳ್ಳಲು ಬೆನ್ನುಮೂಳೆ ಇಲ್ಲದವರು ಟಿಎಂಸಿಗೆ ವಾಪಾಸಾಗಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕೇಸರಿ ಪಕ್ಷದ ಸಂಸದರೊಬ್ಬರು ಹೇಳಿದ್ದಾರೆ.</p>.<p>ಬೃಹತ್ ಜನಾದೇಶದೊಂದಿಗೆ ಚುನಾಯಿತವಾದ ಸರ್ಕಾರದ ವಿರುದ್ಧ ‘ರಾಷ್ಟ್ರಪತಿ ಆಡಳಿತ ಹೇರಿಕೆ ಬೆದರಿಕೆಗಳನ್ನು ಜನರು ಸಹಿಸುವುದಿಲ್ಲ’ ಎಂದು ಪಕ್ಷದ ಮುಖಂಡ ರಾಜೀಬ್ ಬ್ಯಾನರ್ಜಿ ಮಂಗಳವಾರ ಹೇಳಿಕೆ ನೀಡಿದ ಕೆಲವೇ ಗಂಟೆಗಳ ನಂತರ ಬಿಷ್ಣುಪುರದ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಈ ಹೇಳಿಕೆ ನೀಡಿದ್ದಾರೆ.</p>.<p>ಈ ಬಗ್ಗೆ ಸೋಶಿಯಲ್ ಮೀಡಿಯಾ ಪೋಸ್ಟ್ ಮಾಡಿರುವ ಅವರು, ‘42 ಬಿಜೆಪಿ ಕಾರ್ಯಕರ್ತರು ಕೊಲ್ಲಲ್ಪಟ್ಟಾಗ ಮೌನವಾಗಿರುವುದು ಆಡಳಿತ ಪಕ್ಷಕ್ಕೆ ಬೆಂಬಲವನ್ನು ಸೂಚಿಸುತ್ತದೆ. ನೀವು ಮಂತ್ರಿಯಾಗಲು ಸಾಧ್ಯವಾಗದ ಕಾರಣ ನಿಮ್ಮ ಹಳೆಯ ಪಕ್ಷಕ್ಕೆ ಮರು ಪ್ರವೇಶವನ್ನು ಬಯಸುತ್ತೀರಾ?’ ಎಂದು ಪ್ರಶ್ನಿಸಿದ್ದಾರೆ.</p>.<p>ಮಮತಾ ಬ್ಯಾನರ್ಜಿ ಸಂಪುಟದಲ್ಲಿ ಸಚಿವರಾಗಿದ್ದ ಬ್ಯಾನರ್ಜಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ಸೇರಿಕೊಂಡರು. ಆದರೆ, ಹೌರಾ ಜಿಲ್ಲೆಯ ಡೊಮ್ಜುರ್ ಸ್ಥಾನವನ್ನು ಉಳಿಸಿಕೊಳ್ಳಲು ವಿಫಲರಾದರು.</p>.<p>ಏತನ್ಮಧ್ಯೆ, ‘ಮಮತಾ ಬ್ಯಾನರ್ಜಿಗೆ ದ್ರೋಹ ಮಾಡುವವರಿಗೆ ಬಂಗಾಳದಲ್ಲಿ ಸ್ಥಾನವಿಲ್ಲ’ ಎಂ ಘೋಷಣೆ ಇರುವ ಪೋಸ್ಟರ್ಗಳು ಬುಧವಾರ ಡೊಮ್ಜೂರ್ನ ಕೆಲವು ಸ್ಥಳಗಳಲ್ಲಿ ಕಾಣಿಸಿಕೊಂಡವು.</p>.<p>ಬಿಜೆಪಿ ಸೇರಿದ್ದ ಹಲವು ಮುಖಂಡರು ಕಳೆದ ಕೆಲವು ವಾರಗಳಲ್ಲಿ ಮಮತಾ ಬ್ಯಾನರ್ಜಿ ಶಿಬಿರಕ್ಕೆ ಮತ್ತೆ ಸೇರಲು ಇಚ್ಛಿಸಿದ್ದಾರೆ. ಅದರಲ್ಲಿ ಶಾಸಕರಾದ ಸೋನಾಲಿ ಗುಹಾ ಮತ್ತು ದೀಪೇಂದು ಬಿಶ್ವಾಸ್ ಪ್ರಮುಖರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಪಶ್ಚಿಮ ಬಂಗಾಳದ ಬಿಜೆಪಿಯಲ್ಲಿ ಒಳಜಗಳಗಳ ಕುರಿತ ವರದಿಗಳ ಮಧ್ಯೆ ಬಿಜೆಪಿಯಲ್ಲಿ ಉಳಿದುಕೊಳ್ಳಲು ಬೆನ್ನುಮೂಳೆ ಇಲ್ಲದವರು ಟಿಎಂಸಿಗೆ ವಾಪಾಸಾಗಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕೇಸರಿ ಪಕ್ಷದ ಸಂಸದರೊಬ್ಬರು ಹೇಳಿದ್ದಾರೆ.</p>.<p>ಬೃಹತ್ ಜನಾದೇಶದೊಂದಿಗೆ ಚುನಾಯಿತವಾದ ಸರ್ಕಾರದ ವಿರುದ್ಧ ‘ರಾಷ್ಟ್ರಪತಿ ಆಡಳಿತ ಹೇರಿಕೆ ಬೆದರಿಕೆಗಳನ್ನು ಜನರು ಸಹಿಸುವುದಿಲ್ಲ’ ಎಂದು ಪಕ್ಷದ ಮುಖಂಡ ರಾಜೀಬ್ ಬ್ಯಾನರ್ಜಿ ಮಂಗಳವಾರ ಹೇಳಿಕೆ ನೀಡಿದ ಕೆಲವೇ ಗಂಟೆಗಳ ನಂತರ ಬಿಷ್ಣುಪುರದ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಈ ಹೇಳಿಕೆ ನೀಡಿದ್ದಾರೆ.</p>.<p>ಈ ಬಗ್ಗೆ ಸೋಶಿಯಲ್ ಮೀಡಿಯಾ ಪೋಸ್ಟ್ ಮಾಡಿರುವ ಅವರು, ‘42 ಬಿಜೆಪಿ ಕಾರ್ಯಕರ್ತರು ಕೊಲ್ಲಲ್ಪಟ್ಟಾಗ ಮೌನವಾಗಿರುವುದು ಆಡಳಿತ ಪಕ್ಷಕ್ಕೆ ಬೆಂಬಲವನ್ನು ಸೂಚಿಸುತ್ತದೆ. ನೀವು ಮಂತ್ರಿಯಾಗಲು ಸಾಧ್ಯವಾಗದ ಕಾರಣ ನಿಮ್ಮ ಹಳೆಯ ಪಕ್ಷಕ್ಕೆ ಮರು ಪ್ರವೇಶವನ್ನು ಬಯಸುತ್ತೀರಾ?’ ಎಂದು ಪ್ರಶ್ನಿಸಿದ್ದಾರೆ.</p>.<p>ಮಮತಾ ಬ್ಯಾನರ್ಜಿ ಸಂಪುಟದಲ್ಲಿ ಸಚಿವರಾಗಿದ್ದ ಬ್ಯಾನರ್ಜಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ಸೇರಿಕೊಂಡರು. ಆದರೆ, ಹೌರಾ ಜಿಲ್ಲೆಯ ಡೊಮ್ಜುರ್ ಸ್ಥಾನವನ್ನು ಉಳಿಸಿಕೊಳ್ಳಲು ವಿಫಲರಾದರು.</p>.<p>ಏತನ್ಮಧ್ಯೆ, ‘ಮಮತಾ ಬ್ಯಾನರ್ಜಿಗೆ ದ್ರೋಹ ಮಾಡುವವರಿಗೆ ಬಂಗಾಳದಲ್ಲಿ ಸ್ಥಾನವಿಲ್ಲ’ ಎಂ ಘೋಷಣೆ ಇರುವ ಪೋಸ್ಟರ್ಗಳು ಬುಧವಾರ ಡೊಮ್ಜೂರ್ನ ಕೆಲವು ಸ್ಥಳಗಳಲ್ಲಿ ಕಾಣಿಸಿಕೊಂಡವು.</p>.<p>ಬಿಜೆಪಿ ಸೇರಿದ್ದ ಹಲವು ಮುಖಂಡರು ಕಳೆದ ಕೆಲವು ವಾರಗಳಲ್ಲಿ ಮಮತಾ ಬ್ಯಾನರ್ಜಿ ಶಿಬಿರಕ್ಕೆ ಮತ್ತೆ ಸೇರಲು ಇಚ್ಛಿಸಿದ್ದಾರೆ. ಅದರಲ್ಲಿ ಶಾಸಕರಾದ ಸೋನಾಲಿ ಗುಹಾ ಮತ್ತು ದೀಪೇಂದು ಬಿಶ್ವಾಸ್ ಪ್ರಮುಖರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>