<p><strong>ನವದೆಹಲಿ:</strong> ‘ಉತ್ತರ ಪ್ರದೇಶ ಲಖಿಂಪುರ ಖೇರಿಯಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ಮಾಡಿದವರನ್ನು ತಪ್ಪಿತಸ್ಥರು ಎಂಬುದಾಗಿ ಪರಿಗಣಿಸುವುದಿಲ್ಲ. ಅವರು ಪ್ರತಿಭಟನಾಕಾರರ ಮೇಲೆ ಎಸ್ಯುವಿ ಚಲಿಸಿದ್ದಕ್ಕೆ ಪ್ರತಿಕ್ರಿಯಿಸಿದ್ದಾರಷ್ಟೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.</p>.<p>ಪ್ರತಿಭಟನಾಕಾರರ ಮೇಲೆ ಎಸ್ಯುವಿ ಚಲಾಯಿಸಲಾಗಿದೆ ಎನ್ನಲಾಗಿದ್ದು, ಕೆಲವರು ಮೃತಪಟ್ಟಿದ್ದರು. ಬಳಿಕ ನಡೆದ ಹಿಂಸಾಚಾರದಲ್ಲಿ ಕೆಲವರು ಸಾವಿಗೀಡಾಗಿದ್ದರು. ಘಟನೆಯಲ್ಲಿ ರೈತರು, ಪತ್ರಕರ್ತ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಒಟ್ಟು 8 ಮಂದಿ ಮೃತಪಟ್ಟಿದ್ದರು.</p>.<p><strong>ಓದಿ:</strong><a href="https://www.prajavani.net/india-news/up-violence-ashish-mishra-arrives-at-up-crime-branch-office-874049.html" itemprop="url">ಲಖಿಂಪುರ–ಖೇರಿ ರೈತರ ಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾದ ಆಶಿಶ್ ಮಿಶ್ರಾ</a></p>.<p>‘ಬೆಂಗಾವಲು ಪಡೆಯ ವಾಹನಗಳು ಚಲಿಸಿ ರೈತರು ಮೃತಪಟ್ಟ ಬಳಿಕ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆಯಷ್ಟೆ. ಅವರನ್ನು ತಪ್ಪಿತಸ್ಥರು ಎಂದು ನಾನು ಪರಿಗಣಿಸುವುದಿಲ್ಲ’ ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಟಿಕಾಯತ್ ಉತ್ತರಿಸಿದ್ದಾರೆ.</p>.<p>‘ಅದು ಬಿಜೆಪಿ ಕಾರ್ಯಕರ್ತರದ್ದೇ ಆಗಿರಲಿ, ರೈತರದ್ದೇ ಆಗಿರಲಿ, ಜೀವಹಾನಿಯಾಗಿರುವುದಕ್ಕೆ ನಮಗೆ ಬೇಸರವಾಗಿದೆ. ಅದೊಂದು ದುರದೃಷ್ಟಕರ ಘಟನೆ. ನ್ಯಾಯ ದೊರೆಯುವ ಭರವಸೆಯಲ್ಲಿ ನಾವಿದ್ದೇವೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾರದ ನಾಯಕ ಯೋಗೇಂದ್ರ ಯಾದವ್ ಹೇಳಿದ್ದಾರೆ.</p>.<p>ಲಖಿಂಪುರ ಘಟನೆಗೆ ಸಂಬಂಧಿಸಿ ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಹಾಗೂ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಬಂಧಿಸಬೇಕು ಎಂದು ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಉತ್ತರ ಪ್ರದೇಶ ಲಖಿಂಪುರ ಖೇರಿಯಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ಮಾಡಿದವರನ್ನು ತಪ್ಪಿತಸ್ಥರು ಎಂಬುದಾಗಿ ಪರಿಗಣಿಸುವುದಿಲ್ಲ. ಅವರು ಪ್ರತಿಭಟನಾಕಾರರ ಮೇಲೆ ಎಸ್ಯುವಿ ಚಲಿಸಿದ್ದಕ್ಕೆ ಪ್ರತಿಕ್ರಿಯಿಸಿದ್ದಾರಷ್ಟೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.</p>.<p>ಪ್ರತಿಭಟನಾಕಾರರ ಮೇಲೆ ಎಸ್ಯುವಿ ಚಲಾಯಿಸಲಾಗಿದೆ ಎನ್ನಲಾಗಿದ್ದು, ಕೆಲವರು ಮೃತಪಟ್ಟಿದ್ದರು. ಬಳಿಕ ನಡೆದ ಹಿಂಸಾಚಾರದಲ್ಲಿ ಕೆಲವರು ಸಾವಿಗೀಡಾಗಿದ್ದರು. ಘಟನೆಯಲ್ಲಿ ರೈತರು, ಪತ್ರಕರ್ತ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಒಟ್ಟು 8 ಮಂದಿ ಮೃತಪಟ್ಟಿದ್ದರು.</p>.<p><strong>ಓದಿ:</strong><a href="https://www.prajavani.net/india-news/up-violence-ashish-mishra-arrives-at-up-crime-branch-office-874049.html" itemprop="url">ಲಖಿಂಪುರ–ಖೇರಿ ರೈತರ ಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾದ ಆಶಿಶ್ ಮಿಶ್ರಾ</a></p>.<p>‘ಬೆಂಗಾವಲು ಪಡೆಯ ವಾಹನಗಳು ಚಲಿಸಿ ರೈತರು ಮೃತಪಟ್ಟ ಬಳಿಕ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆಯಷ್ಟೆ. ಅವರನ್ನು ತಪ್ಪಿತಸ್ಥರು ಎಂದು ನಾನು ಪರಿಗಣಿಸುವುದಿಲ್ಲ’ ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಟಿಕಾಯತ್ ಉತ್ತರಿಸಿದ್ದಾರೆ.</p>.<p>‘ಅದು ಬಿಜೆಪಿ ಕಾರ್ಯಕರ್ತರದ್ದೇ ಆಗಿರಲಿ, ರೈತರದ್ದೇ ಆಗಿರಲಿ, ಜೀವಹಾನಿಯಾಗಿರುವುದಕ್ಕೆ ನಮಗೆ ಬೇಸರವಾಗಿದೆ. ಅದೊಂದು ದುರದೃಷ್ಟಕರ ಘಟನೆ. ನ್ಯಾಯ ದೊರೆಯುವ ಭರವಸೆಯಲ್ಲಿ ನಾವಿದ್ದೇವೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾರದ ನಾಯಕ ಯೋಗೇಂದ್ರ ಯಾದವ್ ಹೇಳಿದ್ದಾರೆ.</p>.<p>ಲಖಿಂಪುರ ಘಟನೆಗೆ ಸಂಬಂಧಿಸಿ ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಹಾಗೂ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಬಂಧಿಸಬೇಕು ಎಂದು ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>