ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ವಿರುದ್ಧ ಮತ ಚಲಾಯಿಸಿ ದೇಶಕ್ಕೆ ದ್ರೋಹ ಬಗೆದ ಜನರು: ಗುಜರಾತ್ ಸಚಿವ

Last Updated 17 ಡಿಸೆಂಬರ್ 2022, 15:37 IST
ಅಕ್ಷರ ಗಾತ್ರ

ಪಾಲನ್‌ಪುರ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಿದ ಜನರು ದೇಶಕ್ಕೆ ದ್ರೋಹ ಬಗೆದಿದ್ದಾರೆ ಎಂದು ಗುಜರಾತ್ ಸಚಿವ ಜಗದೀಶ ವಿಶ್ವಕರ್ಮ ಶನಿವಾರ ಆರೋಪಿಸಿದ್ದಾರೆ.

ಗುಜರಾತ್‌ನ ವಡ್‌ಗಾಮ್ ಕ್ಷೇತ್ರದಲ್ಲಿ ಸತತ ಎರಡನೇ ಬಾರಿ ಕಾಂಗ್ರೆಸ್ ಗೆಲುವು ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ಮತದಾರರ ವಿರುದ್ಧ ಸಚಿವರು ಆಕ್ರೋಶ ಹೊರ ಹಾಕಿದರು.

ವಡ್‌ಗಾಮ್ ಕ್ಷೇತ್ರದಲ್ಲಿ ತಮ್ಮ ಹುಟ್ಟುರಾದ ವರ್ಣವಾಡದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಬಿಜೆಪಿ ವಿರುದ್ಧ ಮತ ಚಲಾಯಿಸಿದವರೆಲ್ಲರೂ ದೇಶಕ್ಕೆ ದ್ರೋಹ ಮಾಡಿದ್ದಾರೆ. ಇಂದಿನ ಆತ್ಮೀಯ ಸ್ವಾಗತದ ಬದಲು ನೀವು ಪಕ್ಷಕ್ಕೆ ಮತ ಹಾಕಿದ್ದರೆ ನಾನು ಹೆಚ್ಚು ಖುಷಿಪಡುತ್ತಿದ್ದೆ ಎಂದು ಹೇಳಿದರು.

ಶಾಸಕರು ಆಡಳಿತ ಪಕ್ಷದಿಂದ ಗೆದ್ದು ಬಂದರೆ ಮಾತ್ರ ಪ್ರಾದೇಶಿಕ ಅಭಿವೃದ್ಧಿ ಸಾಧ್ಯ ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT