ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೊನೇಷ್ಯಾದಲ್ಲಿ ಪ್ರವಾಹ:ಸುರಕ್ಷಿತ ಸ್ಥಳಕ್ಕೆ ಸಂತ್ರಸ್ತರ ಸ್ಥಳಾಂತರ

Last Updated 22 ಫೆಬ್ರುವರಿ 2021, 11:15 IST
ಅಕ್ಷರ ಗಾತ್ರ

ಬೇಕಸಿ (ಇಂಡೊನೇಷ್ಯಾ): ಧಾರಾಕಾರ ಮಳೆ ಮತ್ತು ಸಿಟರಂ ನದಿ ಒಡ್ಡು ಒಡೆದು ಉಂಟಾದ ಪ್ರವಾಹ ಪರಿಸ್ಥಿತಿಯಿಂದಾಗಿ ಇಂಡೊನೇಷ್ಯಾದ ಬೇಕಸಿ ಜಿಲ್ಲೆಯಲ್ಲಿ ಸಾವಿರಾರು ನಿವಾಸಿಗಳಿಗೆ ಸಮಸ್ಯೆಯಾಗಿದೆ. ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಪಶ್ಚಿಮ ಜಾವಾ ಪ್ರಾಂತ್ಯದಲ್ಲಿನ ಬೇಕಸಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾಗಿದ್ದು, ನದಿ ಉಕ್ಕಿ ಹರಿದಿತ್ತು. ‘ನೀರಾವರಿ ಯೋಜನೆಯ ಕಾಮಗಾರಿಗಳು ಹಾಗೂ ಕೆಲವೆಡೆ ಒಡ್ಡು ಒಡೆದಿವೆ’ ಎಂದು ಸಚಿವ ಬಸುಕಿ ಹಡಿಮುಲ್ಜೊನೊ ಅವರು ಸೋಮವಾರ ತಿಳಿಸಿದರು.

ರಕ್ಷಣಾ ಕಾರ್ಯಗಳಿಗಾಗಿ ರಾಷ್ಟ್ರೀಯ ಶೋಧ ಮತ್ತು ರಕ್ಷಣಾ ತಂಡದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿರ್ವಹಣಾ ಸಂಸ್ಥೆಯ ವಕ್ತಾರ ರಡಿತ್ಯಾ ಜಟಿ ಅವರ ಪ್ರಕಾರ, ನಾಲ್ಕು ಗ್ರಾಮಗಳಿಂದ ಸುಮಾರು 28 ಸಾವಿರ ನಿವಾಸಿಗಳು ಸಂತ್ರಸ್ತರಾಗಿದ್ದು, 4,184 ಜನರನ್ನು ಸ್ಥಳಾಂತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT