ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಬೆಳಗಾವಿಯಿಂದ ಶಂಕಿತನನ್ನು ಕರೆದೊಯ್ದ ಪೊಲೀಸರು

Last Updated 28 ಮಾರ್ಚ್ 2023, 9:11 IST
ಅಕ್ಷರ ಗಾತ್ರ

ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಎರಡು ಬಾರಿ ಬೆದರಿಕೆ ಕರೆಗಳನ್ನು ಮಾಡಿದ್ದಕ್ಕೆ ಸಂಬಂಧಿಸಿದಂತೆ ಕೊಲೆ ಪ್ರಕರಣದ ಆರೋಪಿಯನ್ನು ನಾಗ್ಪುರ ಪೊಲೀಸರು ಮಂಗಳವಾರ ಕರ್ನಾಟಕದ ಬೆಳಗಾವಿ ಜೈಲಿನಿಂದ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯನ್ನು ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂದು ಗುರುತಿಸಲಾಗಿದ್ದು, ಆತನನ್ನು ಹಿಂಡಲಗಾ ಜೈಲಿನಿಂದ ಬಂಧಿಸಿ ಬೆಳಗ್ಗೆ ವಿಮಾನದಲ್ಲಿ ನಾಗ್ಪುರಕ್ಕೆ ಕರೆತರಲಾಯಿತು ಎಂದು ನಾಗ್ಪುರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೂಜಾರಿ ವಿರುದ್ಧ ನಗರದ ಧಾಂತೋಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

‘ಕೇಂದ್ರ ಸಚಿವರಿಗೆ ಬೆದರಿಕೆ ಕರೆಗಳನ್ನು ಮಾಡುವ ಹಿಂದಿನ ಉದ್ದೇಶವನ್ನು ತಿಳಿದುಕೊಳ್ಳಲು ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು ಮತ್ತು ಮಧ್ಯಾಹ್ನ ಪೂಜಾರಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು’ ಎಂದು ಅಧಿಕಾರಿ ಹೇಳಿದ್ದಾರೆ.

ಜನವರಿ 14 ರಂದು, ಜಯೇಶ್ ಪೂಜಾರಿ ಎಂದು ಗುರುತಿಸಿಕೊಂಡ ವ್ಯಕ್ತಿಯೊಬ್ಬರು ನಾಗ್ಪುರ ನಗರದ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಬೆದರಿಕೆ ಕರೆ ಮಾಡಿ ರೂ. 100 ಕೋಟಿ ನೀಡದಿದ್ದರೆ ಗಡ್ಕರಿ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಕರೆ ಮಾಡಿದ ವ್ಯಕ್ತಿ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡಿದ್ದ.

ಎರಡನೇ ಬಾರಿ ರೂ. 10 ಕೋಟಿ ಪಾವತಿಸದಿದ್ದರೆ ಗಡ್ಕರಿ ಅವರಿಗೆ ಹಾನಿ ಮಾಡುವುದಾಗಿ ಬೆದರಿಕೆ ಹಾಕುವ ಹೊಸ ಕರೆಗಳನ್ನು ಅದೇ ವ್ಯಕ್ತಿ (ಪೂಜಾರಿ) ಮಾರ್ಚ್ 21 ರಂದು ಅವರ ಕಚೇರಿಗೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರೆಗಳ ನಂತರ, ನಾಗ್ಪುರ ಸಂಸದರ ಮನೆ ಮತ್ತು ಕಚೇರಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಕೊಲೆ ಪ್ರಕರಣದಲ್ಲಿ ಪೂಜಾರಿಗೆ ಮರಣದಂಡನೆ ಶಿಕ್ಷೆಯಾಗಿದ್ದು, ಬೆದರಿಕೆ ಕರೆಗಳಲ್ಲಿ ತಮ್ಮ ಕೈವಾಡವನ್ನು ಅಲ್ಲಗಳೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT