ಮುಂಬೈ (ಪಿಟಿಐ): ‘ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪ್ರಕರಣದ ತನಿಖೆಯನ್ನು ಪ್ರಾಮಾಣಿಕವಾಗಿ ಮತ್ತು ನಿಷ್ಪಕ್ಷಪಾತವಾಗಿ ನಡೆಸುವುದು ಕೆಲವು ಸ್ಥಾಪಿತ ಶಕ್ತಿಗಳಿಗೆ ಬೇಕಾಗಿಲ್ಲ. ಹೀಗಾಗಿ ನನ್ನ ವಿರುದ್ಧ ಲಂಚದ ಆರೋಪ ಮಾಡಲಾಗುತ್ತಿದೆ. ನನ್ನನ್ನು ಬಂಧಿಸುವ ಮತ್ತು ಕೆಲಸದಿಂದ ವಜಾ ಮಾಡುವ ಬೆದರಿಕೆ ಹಾಕಲಾಗುತ್ತಿದೆ’ ಎಂದು ಎನ್ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಆರೋಪಿಸಿದ್ದಾರೆ.