<p><strong>ಸಿಲಿಗುರಿ: ‘</strong>ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿದ ಆರೋಪದಡಿಬಿಜೆಪಿಯ ಮೂವರು ಶಾಸಕರನ್ನು ಭಾನುವಾರ ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಉತ್ತರ ಬಂಗಾಳದಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳಲ್ಲಿ ಕೊರತೆಯಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರಾದ ಶಂಕರ್ ಘೋಶ್, ಆನಂದಮೊಯಿ ಬರ್ಮನ್ ಮತ್ತು ಶಿಖಾ ಚಟ್ಟೋಪಾಧ್ಯಾಯ ಅವರು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಯಿತು. ಬಳಿಕ ಬಿಡುಗಡೆಗೊಳಿಸಲಾಯಿತು ಎಂದು ಅವರು ತಿಳಿಸಿದರು.</p>.<p>‘ಸಫ್ದರ್ ಹಶ್ಮಿ ಚೌಕ್ನಲ್ಲಿ ನಾವು ಧರಣಿಗೆ ಕುಳಿತಿದೆವು. ಈ ವೇಳೆ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿದ್ದೆವು. ಅಲ್ಲದೆ ಅಲ್ಲಿ ಯಾರೊಬ್ಬರು ಇರಲಿಲ್ಲ’ ಎಂದು ಶಾಸಕರು ಹೇಳಿದ್ದಾರೆ.</p>.<p>ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಟಿಎಂಸಿ ನಾಯಕ ಗೌತಮ್ ಅವರು, ಬಿಜೆಪಿ ಶಾಸಕರು ಪ್ರತಿಭಟಿಸುವ ಮೂಲಕ ಜನರಿಗೆ ದ್ರೋಹ ಮಾಡಿದ್ದಾರೆ. ಜನರಿಗೆ ಬಿಜೆಪಿ ನಾಯಕರ ನಿಜ ಮುಖ ತಿಳಿಯಬೇಕು. ಇವರಿಗೆ ಸೋಂಕು ಪ್ರಸರಣದ ಬಗ್ಗೆ ಯಾವುದೇ ಕಾಳಜಿ ಇಲ್ಲ. ಈ ಬಿಕ್ಕಟ್ಟಿನ ಸಮಯವನ್ನು ರಾಜಕೀಯಕ್ಕಾಗಿ ಬಳಸುತ್ತಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರವು ಕೋವಿಡ್ ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ’ ಎಂದರು.</p>.<p>ಪಶ್ಚಿಮ ಬಂಗಾಳದಲ್ಲಿ ಭಾನುವಾರದಿಂದ 15 ದಿನಗಳ ಲಾಕ್ಡೌನ್ ಜಾರಿಗೊಳಿಸಲಾಗಿದೆ.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/government-issues-guidelines-on-covid-management-in-rural-peri-urban-areas-830959.html" target="_top">ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಹೆಚ್ಚಳ: ನಿರ್ವಹಣೆಗೆ ಕೇಂದ್ರದಿಂದ ಮಾರ್ಗಸೂಚಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಲಿಗುರಿ: ‘</strong>ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿದ ಆರೋಪದಡಿಬಿಜೆಪಿಯ ಮೂವರು ಶಾಸಕರನ್ನು ಭಾನುವಾರ ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಉತ್ತರ ಬಂಗಾಳದಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳಲ್ಲಿ ಕೊರತೆಯಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರಾದ ಶಂಕರ್ ಘೋಶ್, ಆನಂದಮೊಯಿ ಬರ್ಮನ್ ಮತ್ತು ಶಿಖಾ ಚಟ್ಟೋಪಾಧ್ಯಾಯ ಅವರು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಯಿತು. ಬಳಿಕ ಬಿಡುಗಡೆಗೊಳಿಸಲಾಯಿತು ಎಂದು ಅವರು ತಿಳಿಸಿದರು.</p>.<p>‘ಸಫ್ದರ್ ಹಶ್ಮಿ ಚೌಕ್ನಲ್ಲಿ ನಾವು ಧರಣಿಗೆ ಕುಳಿತಿದೆವು. ಈ ವೇಳೆ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿದ್ದೆವು. ಅಲ್ಲದೆ ಅಲ್ಲಿ ಯಾರೊಬ್ಬರು ಇರಲಿಲ್ಲ’ ಎಂದು ಶಾಸಕರು ಹೇಳಿದ್ದಾರೆ.</p>.<p>ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಟಿಎಂಸಿ ನಾಯಕ ಗೌತಮ್ ಅವರು, ಬಿಜೆಪಿ ಶಾಸಕರು ಪ್ರತಿಭಟಿಸುವ ಮೂಲಕ ಜನರಿಗೆ ದ್ರೋಹ ಮಾಡಿದ್ದಾರೆ. ಜನರಿಗೆ ಬಿಜೆಪಿ ನಾಯಕರ ನಿಜ ಮುಖ ತಿಳಿಯಬೇಕು. ಇವರಿಗೆ ಸೋಂಕು ಪ್ರಸರಣದ ಬಗ್ಗೆ ಯಾವುದೇ ಕಾಳಜಿ ಇಲ್ಲ. ಈ ಬಿಕ್ಕಟ್ಟಿನ ಸಮಯವನ್ನು ರಾಜಕೀಯಕ್ಕಾಗಿ ಬಳಸುತ್ತಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರವು ಕೋವಿಡ್ ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ’ ಎಂದರು.</p>.<p>ಪಶ್ಚಿಮ ಬಂಗಾಳದಲ್ಲಿ ಭಾನುವಾರದಿಂದ 15 ದಿನಗಳ ಲಾಕ್ಡೌನ್ ಜಾರಿಗೊಳಿಸಲಾಗಿದೆ.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/government-issues-guidelines-on-covid-management-in-rural-peri-urban-areas-830959.html" target="_top">ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಹೆಚ್ಚಳ: ನಿರ್ವಹಣೆಗೆ ಕೇಂದ್ರದಿಂದ ಮಾರ್ಗಸೂಚಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>